ಮುರುಘಾ ಮಠಕ್ಕೆ ಕಾನೂನು ಪ್ರಕಾರ ನೂತನ ಪೀಠಾಧಿಪತಿ ನೇಮಕವನ್ನು ಮಾಡಲಾಗುವುದು | JANATA NEWS
ಬೆಂಗಳೂರು : ಮುರುಘಾ ಮಠಕ್ಕೆ ಕಾನೂನು ಪ್ರಕಾರ ನೂತನ ಪೀಠಾಧಿಪತಿ ನೇಮಕವನ್ನು ಮಾಡಲಾಗುವುದು ಅಂತ ಸಿಎಂ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.
ಮಠದ ಭಕ್ತರು, ಮಾಜಿ ಶಾಸಕರ ನಿಯೋಗ ನನ್ನನ್ನು ಭೇಟಿ ಮಾಡಿ ಮಾಡಿ ಆಡಳಿತ ವಿಚಾರದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ನನಗೆ ತಿಳಿಸಿದ್ದು, ಟ್ರಸ್ಟ್ ಅನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಕಾನೂನು ಪ್ರಕಾರ ಏನೆಲ್ಲ ಅವಕಾಶ ಇದೆ ಅದನ್ನ ಚರ್ಚೆ ಮಾಡಿದ ಬಳಿಕ, ಎಲ್ಲವನ್ನು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ನಡೆಯಲಿದೆ ಅಂತ ತಿಳಿಸಿದರು.ಮಠದ ಸಂಪೂರ್ಣ ವಿಚಾರಗಳ ಬಗ್ಗೆ ನನಗೆ ಹೇಳಿದ್ದಾರೆ ಅಂತ ತಿಳಿಸಿದರು.
ಮಠದಲ್ಲಿ ಕಾನೂನು ಪ್ರಕಾರ ಒಂದು ಟ್ರಸ್ಟ್ ಇದೆ. ಕಾನೂನು ಪ್ರಕಾರ ಏನೆಲ್ಲ ಅವಕಾಶ ಇದೆ ಅದನ್ನ ಚರ್ಚೆ ಮಾಡುತ್ತೇವೆ. ಏನೇ ಕ್ರಮ ತೆಗೆದುಕೊಂಡರೂ ಕಾನೂನು ಪ್ರಕಾರವೇ ಮುಂದಿನ ಕ್ರಮ ತಗೋತೀವಿ ಅಂತ ತಿಳಿಸಿದರು.