ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ: ದೇವೇಗೌಡರಿಗೆ ಆಹ್ವಾನ | JANATA NEWS
ಬೆಂಗಳೂರು : ಬೆಂಗಳೂರಿನಲ್ಲಿ ನ. 11 ರಂದು ಪ್ರಧಾನಿ ಮೋದಿಯಿಂದ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆಯಾಗಲಿದ್ದು, ಸಚಿವ ಅಶ್ವಥ್ ನಾರಾಯಣ್ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಆಹ್ವಾನ ನೀಡಿದ್ದಾರೆ.
ಪದ್ಮನಾಭ ನಗರದ ಗೌಡರ ನಿವಾಸಕ್ಕೆ ಇಂದು ಭೇಟಿ ನೀಡಿದ ಸಚಿವರು, ಗೌಡರ ಯೋಗಕ್ಷೇಮ ವಿಚಾರಿಸಿ, ಶೀಘ್ರ ಚೇತರಿಸಿಕೊಳ್ಳುವಂತೆ ಶುಭ ಹಾರೈಸಿದರು.
ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಲಿದ್ದು. ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2 ನೇ ಟರ್ಮಿನಲ್ ನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಅಲ್ಲದೇ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ಈ ಕುರಿತಂತೆ ಟ್ವೀಟ್ ಮೂಲಕ ಹಂಚಿಕೊಂಡಿರುವ ಸಚಿವ ಅಶ್ವಥ್ ನಾರಾಯಣ್ ಮಾಜಿ ಪ್ರಧಾನಿಗಳಾದ ಹೆಚ್,ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ, ಹಿರಿಯರ ಆರೋಗ್ಯ ವಿಚಾರಿಸಿದೆ. ಹಾಗೆಯೇ, ನಾಡಪ್ರಭು ಕೆಂಪೇಗೌಡ ಪ್ರತಿಮೆ ಅನಾವರಣ ಪ್ರಯುಕ್ತ ಅಕ್ಟೋಬರ್ 21ರಂದು ನಡೆಯಲಿರುವ ಪವಿತ್ರ ಮಣ್ಣು(ಮೃತ್ತಿಕೆ) ಸಂಗ್ರಹ ಅಭಿಯಾನ ಚಾಲನಾ ಕಾರ್ಯಕ್ರಮ, ನವೆಂಬರ್ 11ರ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣಕ್ಕೆ ಆಹ್ವಾನಿಸಲಾಯಿತು ಎಂದು ಹೇಳಿದ್ದಾರೆ.