ಜನ ಹುಚ್ಚರಾಗಬಹುದು, ದಾರಿಯಲ್ಲೇ ಬಿದ್ದು ಸಾಯಬಹುದು, ಮುಂದಿನ 3 ತಿಂಗಳು ಕಾದಿದೆ ಭಾರೀ ಗಂಡಾಂತರ! | JANATA NEWS
ಹಾಸನ : ಕಾರ್ತಿಕದಿಂದ ಜನವರಿವರೆಗೂ ಮೂರು ತಿಂಗಳ ಕಾಲ ಕಂಟಕ ಎದುರಾಗಲಿದೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಳ್ಳಿಯಲ್ಲಿರುವ ಕೋಡಿ ಮಠದಲ್ಲಿ ಮಾತನಾಡಿದ ಅವರು, ಕಾರ್ತಿಕ, ಮಾರ್ಗಶಿರದಿಂದ ತೊಡಗಿ ಜನವರಿ ಪ್ರಥಮ ಭಾಗದವರೆಗೆ ಭಾರಿ ಲೋಕ ಕಂಟಕವಿದೆ.
ಅದು ಭೂ ಕಂಟಕದ ರೂಪದಲ್ಲಿರಬಹುದು, ಪ್ರಾದೇಶಿಕವಾಗಿಯೂ ಸಂಘರ್ಷವಿರಬಹುದು, ಪ್ರಾಕೃತಿಕಾಗಿಯೂ ಇರಬಹುದು, ರಾಜ ಬೀದಿಯೂ ಇರಬಹುದು ಎಂದು ಹೇಳಿದರು.
ಜನರು ನಿಯಂತ್ರಣ ಕಳೆದುಕೊಂಡು ಹುಚ್ಚರಾಗಬಹುದು, ದಾರಿ ಒಳಗೆ ಬಿದ್ದು ಸಾಯಬಹುದು, ದೇಹ ಅಶಕ್ತಿಯಿಂದ ದಾರಿಯಲ್ಲಿ ಬಿದ್ದು ಸಾಯುವುದು, ಅಂಗಾಂಗಗಳ ಮೇಲೆ ಪ್ರಭಾವ ಕಳೆದುಕೊಳ್ಳುತ್ತಾರೆ ಎಂದು ಹೇಳಿದರು. ಜಾಗತಿಕ ದೋಷ, ರಾಷ್ಟ್ರ ದೋಷವೂ ಇದೆ.
ಎರಡು, ಮೂರು ತಿಂಗಳು ಮನುಷ್ಯರು ದೈವ, ಭಕ್ತಿಯಿಂದ, ನಂಬಿಕೆಯಿಂದ ಇರುವುದು ಬಹಳ ಮುಖ್ಯ. ಕಾರ್ತಿಕದವರೆಗೂ ಮಳೆ ಇರುತ್ತೆ. ಮಠದಲ್ಲಿ ಜನವರಿಯವರೆಗೂ ಬೆಳಿಗ್ಗೆ, ಸಂಜೆ, ಮಹಾರುದ್ರಜಪವನ್ನು ಪ್ರಾರಂಭ ಮಾಡಿದ್ದೇವೆ ಎಂದರು.