ಅಮಾನತುಗೊಂಡಿದ್ದ ಇನ್ಸ್ಪೆಕ್ಟರ್ ಹೃದಯಾಘಾತದಿಂದ ಸಾವು | JANATA NEWS
ಬೆಂಗಳೂರು : ಅಮಾನತುಗೊಂಡಿದ್ದ ಇನ್ಸ್ಪೆಕ್ಟರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ವಾರ ಕರ್ತವ್ಯಲೋಪದಡಿಯಲ್ಲಿ ಅಮಾನತುಗೊಂಡಿದ್ದ ಕೆ.ಆರ್.ಪುರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.
ಬೆಂಗಳೂರಿನ K.R.ಪುರ ಠಾಣೆ ಇನ್ಸ್ಪೆಕ್ಟರ್ ನಂದೀಶ್ ಮೃತ ಇನ್ಸ್ಪೆಕ್ಟರ್. ನಂದೀಶ್ ಮೈಸೂರಿನ ಹುಣಸೂರು ಮೂಲದವರು. ಹೃದಯಾಘಾತದಿಂದ ಕೆ.ಆರ್.ಪುರ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ 2019 ರಿಂದ 2020ರವರೆಗೆ ಕಾರ್ಯ ನಿರ್ವಹಿಸಿದ್ದರು. ಕಳೆದ ಎಂಟು ತಿಂಗಳ ಹಿಂದೆ ಕೆ.ಆರ್.ಪುರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಆಗಿ ವರ್ಗಾವಣೆ ಆಗಿ ಬಂದಿದ್ದರು. ನಂದೀಶ್, ಇತ್ತೀಚೆಗೆ ಪಬ್ವೊಂದಕ್ಕೆ ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ಅಮಾನತುಗೊಂಡಿದ್ದರು.