Mon,May06,2024
ಕನ್ನಡ / English

ಸರ್ಕಾರಿ ಶಾಲಾ-ಕಾಲೇಜುಗಳಿಗೆ ಪ್ರಹ್ಲಾದ್ ಜೋಶಿ ಬಂಪರ್ ಗಿಫ್ಟ್, 1177 ಸರ್ಕಾರಿ ಶಾಲೆಗಳಿಗೆ ಬಣ್ಣದರ್ಪಣೆ | JANATA NEWS

28 Oct 2022
2162

ಧಾರವಾಡ : ಧಾರವಾಡ ಲೋಕಸಭಾ ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದೀಪಾವಳಿ ಬಂಪರ್ ಗಿಫ್ಟ್ ನೀಡಿದ್ದಾರೆ. 1177 ಶಾಲಾ ಕಾಲೇಜುಗಳಿಗೆ ಹೊಸದಾಗಿ ಬಣ್ಣ ಹಚ್ವುವ ಬಣ್ಣದರ್ಪಣೆ ಕಾರ್ಯಕ್ರಮದ ಜೊತೆಗೆ, 320 ಹೊಸ ಕ್ಲಾಸ್ ರೂಮ್ ಗಳನ್ನ ಕಟ್ಟಿಸಿಕೊಡುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಘೋಷಿಸಿದ್ದಾರೆ.

ಪ್ರಹ್ಲಾದ್ ಜೋಶಿ ಅವರು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು‌ ಹೊಸ ಹೊಸ ಕಾರ್ಯಕ್ರಮಗಳ ಮೂಲಕ ನಮಗೆ ಪ್ರೇರಣೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಿಗೆ ಹೊಸ ರೂಪ ನೀಡಲು ಬಣ್ಣದರ್ಪಣೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ನಾಳೆ ಕುಂದಗೋಳದ ಹರಭಟ ಶಾಲೆ ಮೈದಾನದಲ್ಲಿ ಚಾಲನೆ ನೀಡಲಾಗುತ್ತದೆ ಎಂದರು.

ಸರ್ಕಾರಿ ಶಾಲಾ, ಕಾಲೇಜುಗಳಿಗೆ ಬಣ್ಣದರ್ಪಣೆ ಮಾಡುವ ಕಾರ್ಯಕ್ಕೆ ಮುಂದಾಗಿದ್ದು, ಕೆಲವರು ಶಾಲೆ ಹಾಳಾಗಿದೆ, ಕೆಲವರು ಶಾಲೆ ಕೆಟ್ಟಿದೆ, ಶಾಲೆ ಗಲೀಜಾಗಿದೆ ಎಂದೆಲ್ಲಾ ಬರುತ್ತಿದ್ದಾರೆ. ಎಲ್ಲವನ್ನೂ ನೋಡಿದ ಬಳಿಕ ಇಂತಹ ಶಾಲೆಗಳಿಗೆ ಹೊಸ ಸ್ವರೂಪ ನೀಡಲು ಹೊಸ ಯೋಜನೆ ರೂಪಿಸಲಾಗುತ್ತಿದೆ.

ಪ್ರಲ್ಹಾದ್ ಜೋಶಿ ಅವರ ಕ್ಷಮತಾ ಸೇವಾ ಸಂಸ್ಥೆಯಿಂದ ಉಚಿತವಾಗಿ ಬಣ್ಣವನ್ನ ನೀಡಲಾಗುವುದು. ಕ್ಲಾಸ್ ರೂಮ್ ಗಳಿಗೆ ಬಣ್ಣ ಹಚ್ಚಲು 20 ಲೀಟರ್ ಪೇಂಟ್ ಅನ್ನ ಉಚಿತವಾಗಿ ನೀಡಲಾಗುವುದು ಎಂದು ಜೋಶಿ ಹೇಳಿದರು. ಶಾಲೆಯ ಹೊರ ಗೋಡೆಗಳಿಗೂ ಪ್ರತ್ಯೇಕವಾಗಿ ಬಣ್ಣ ವಿತರಿಸಲಾಗುವುದು. ಶಾಲೆಗಳಿಗೆ ಬಣ್ಣ ಹಚ್ಚಲು ಶ್ರಮದಾನದ ಕಾರ್ಯಕ್ಕೆ ವಿದ್ಯಾರ್ಥಿ ಸಂಘಟನೆಗಳು, ಸೇವಾ ಸಂಘಸಂಸ್ಥೆಗಳು, ಶಿಕ್ಷಕರು ಮುಂದೆ ಬರಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದರು. 20 ರೂಪಾಯಿ ಬಾಂಡ್ ಪೇಪರ್ ಮೇಲೆ ಸಹಿ ಹಾಕಿ ಶಾಲೆಗೆ ಬಣ್ಣ ಹಚ್ಚುವ ಒಪ್ಪಂದದೊಂದಿಗೆ ಸಂಘ ಸಂಸ್ಥೆಗಳು ಉಚಿತವಾಗಿ ಬಣ್ಣ ಪಡೆಯಬಹುದಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನ ಭಾಗೀಧಾರಿ ಆಂದೋಲನಗಳನ್ನು ದೇಶಕ್ಕೆ ಪರಿಚಯಿಸಿದರು.ಸ್ವಚ್ಛ ಭಾರತ ಇರಬಹುದು, ಗಂಗಾ ಕಲ್ಯಾಣ ಯೋಜನೆಗಳಿಗೆ ಜನರಿಂದ ಬಹಳ ಅದ್ಭುತವಾದ ಪ್ರತಿಕ್ರಿಯೆ ದೊರಕಿತು. ಅದೇ ರೀತಿಯಲ್ಲಿ ನಮ್ಮ ಜಿಲ್ಲೆಯಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಈ ರೀತಿಯ ಅಭಿಯಾನ ಮಾಡಲು ಮುಂದಾಗಿದ್ದೇವೆ. ಇದೇನು ವೋಟು ಗಿಟ್ಟಿಸುವ ಕಾರ್ಯಕ್ರಮವಲ್ಲ. ಇದರಲ್ಲಿ ಸ್ವಚ್ಛತೆಯಿಂದ ಸೌಂದರ್ಯದೆಡೆಗೆ ಎಂಬ ಧ್ಯೇಯವಾಕ್ಯವನ್ನು ಇಟ್ಟುಕೊಂಡು ಈ ಬಣ್ಣದರ್ಪಣೆ ಅಭಿಯಾನ ನಡೆಸಲು ಮುಂದಾಗಿದ್ದೇವೆ. ಈ ಕಾರ್ಯಕ್ರಮದಲ್ಲಿ ಒಟ್ಟು 1177 ಶಾಲೆ ಕಾಲೇಜುಗಳಿದ್ದು ಅದರಲ್ಲಿ 984 ಪ್ರಾಥಮಿಕ ಶಾಲೆಗಳು,139 ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ ಸಂಖ್ಯೆ 54 ಇದೆ ಎಂದು ಮಾಹಿತಿ ನೀಡಿದರು.

RELATED TOPICS:
English summary :Prahlad Joshi bumper gift to govt schools and colleges, 1177 govt schools painted

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...