ಪುನೀತ್ ಸ್ಯಾಟಲೈಟ್ ವರ್ಕ್ ಸ್ಟೇಷನ್ ಉದ್ಘಾಟಿಸಿದ ಸಿಎಂ ಬೊಮ್ಮಾಯಿ | JANATA NEWS
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಮಲ್ಲೇಶ್ವರಂ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಶನ್ ವತಿಯಿಂದ ಸ್ಥಾಪಿಸಿರುವ ಪುನೀತ್ ಸ್ಯಾಟಲೈಟ್ ವರ್ಕ್ ಸ್ಟೇಷನ್ ಅನ್ನು ಉದ್ಘಾಟಿಸಿ ಮಾತನಾಡಿದರು.
ಐಟಿ, ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಅಶ್ವತ್ ನಾರಾಯಣ ಅವರು ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಪುನೀತ್ ರಾಜಕುಮಾರ್ ಗುಣಗಾನ ಮಾಡಿದ ಸಿಎಂ ಬೊಮ್ಮಾಯಿ ಅವರು, "ಇವತ್ತು ಅವರ ಪುಣ್ಯ ಸ್ಮರಣೆ ದಿನ. ಪುನೀತ್ ಸದಾ ಹೊಸದನ್ನೂ ಹುಡುಕುತ್ತಿದ್ದರು, ಪ್ರಯೋಗಾತ್ಮಕವಾಗಿದ್ದರು. ಸೃಜನಶೀಲವಾಗಿದ್ದರೂ. ಪುನೀತ್ ಹೆಸರಿನಲ್ಲಿ ಸ್ಯಾಟ್ ಲೈಟ್ ಉದ್ಘಾಟನೆ ಮಾಡುವ ಮೂಲಕ ಅವರ ಕೀರ್ತಿಯನ್ನು ಆಕಾಶದ ಎತ್ತರಕೆ ತೆಗೆದುಕೊಂಡು ಹೋಗುವ ಕೆಲಸ ಮಲ್ಲೇಶ್ವರಂ ಸ್ಕೂಲ್ ಮಾಡ್ತಾ ಇದೆ. ಪುನೀತ್ ಹೆಸರಲ್ಲಿ ದೊಡ್ಡಮಟ್ಟದ ಸ್ಯಾಟ್ ಲೈಟ್ ಮಾಡಿದ್ರೆ ರಾಜ್ಯ ಸರ್ಕಾರದಿಂದಲೇ ಹಣ ಭರಿಸುತ್ತೇವೆ"’ ಎಂದಿದ್ದಾರೆ.