Thu,May02,2024
ಕನ್ನಡ / English

ಸಿದ್ದರಾಮಯ್ಯಗೆ ಧಮ್ ಇದ್ದರೆ ಬಾದಾಮಿಯಿಂದ ಸ್ಪರ್ಧೆ ಮಾಡಲಿ, ಇಲ್ಲವೆ ಚಾಮುಂಡಿ ಕ್ಷೇತ್ರಕ್ಕೆ ಬಂದು ನೋಡಲಿ | JANATA NEWS

31 Oct 2022
2045

ಬೆಂಗಳೂರು : ಧಮ್ ಇದ್ದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿಯಿಂದ ಸ್ಫರ್ಧೆ ಮಾಡಲಿ; ಇಲ್ಲವೆ ಚಾಮುಂಡಿ ಕ್ಷೇತ್ರಕ್ಕೆ ಬಂದು ನೋಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ಸವಾಲು ಹಾಕಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಸಿಎಂ ಆದವರಿಗೆ ಅವರ ಕ್ಷೇತ್ರದಲ್ಲಿ ನಿಲ್ಲಲು ಯೋಗ್ಯತೆ ಇಲ್ಲವೆಂದಾದರೆ ಅವರಿಗೆ ಬೇರೆಯವರ ಬಗ್ಗೆ ಮಾತನಾಡೋ ಹಕ್ಕೇನಿದೆ, ನೈತಿಕತೆ ಇದೆಯಾ..? ಕ್ಷೇತ್ರ ಹುಡುಕುವ ದುಸ್ಥಿತಿ ಇವರಿಗೆ ಬಂದಿದೆ. ಮೋದಿಯವರ ಬಗ್ಗೆ ಏಕವಚನದಲ್ಲಿ ಮಾತನಾಡ್ತಾರೆ. ಮೋದಿ ಹೋದಲ್ಲಿ ಗೆಲ್ತಾರೆ, ಸಿದ್ರಾಮಣ್ಣ, ರಾಹುಲ್ ಹೋದಲ್ಲೆಲ್ಲಾ ಸೋಲ್ತಾರೆ. ಸಿದ್ದು ಚಾಮುಂಡಿ, ಬಾದಾಮಿ ಆಯ್ತು ಈಗ ಕೋಲಾರ ಕಡೆ ನೋಡ್ತಿದ್ದಾರೆ ಎಂದರು.

ಮೋದಿಯವರ ಬಗ್ಗೆ ಏಕವಚನದಲ್ಲಿ ಮಾತನಾಡ್ತಾರೆ. ಮೋದಿ ಹೋದಲ್ಲಿ ಗೆಲ್ತಾರೆ, ಸಿದ್ರಾಮಣ್ಣ, ರಾಹುಲ್ ಹೋದಲ್ಲೆಲ್ಲಾ ಸೋಲ್ತಾರೆ. ಸಿದ್ದು ಚಾಮುಂಡಿ, ಬಾದಾಮಿ ಆಯ್ತು ಈಗ ಕೋಲಾರ ಕಡೆ ನೋಡ್ತಿದ್ದಾರೆ. ಅವರಿಗೆ ಸ್ಥಿರ ಕ್ಷೇತ್ರವಿಲ್ಲ. ಸಿದ್ದರಾಮಯ್ಯ ಒಬ್ಬ ರಾಜಕೀಯ ಮುತ್ಸದ್ದಿ ಅಂತಾದರೆ ಎದೆ ತಟ್ಟಿ ಹೇಳಬೇಕು. ಕಾಂಗ್ರೆಸ್ ಕಡಿಮೆ ಅಂತರದಿಂದ ಗೆಲ್ಲುವ ಕ್ಷೇತ್ರದಿಂದ ಗೆಲ್ತೇನೆ ಅಂತ ಹೇಳಬೇಕು ಎಂದರು.

ಮೋದಿ ಅವರು ಬಿಜೆಪಿ ವೀಕ್ ಪ್ಲೇಸ್ ವಾರಣಾಸಿಗೆ ಹೋಗಿ ಅತಿಹೆಚ್ಚು ವೋಟ್‌ ಗಳಿಸಿದ್ರು. ಯಡಿಯೂರಪ್ಪನವರು ನಿರಂತರವಾಗಿ ಶಿಕಾರಿಪುರದಿಂದಲೇ ಗೆದ್ರು. ಒಂದು ದಿನ ಕ್ಷೇತ್ರ ಬಿಡಲಿಲ್ಲ. ಇದು ಯಡಿಯೂರಪ್ಪ ತಾಕತ್. ಕ್ಷೇತ್ರ ಹುಡುಕುವ ನಾಯಕರಿಂದ ಕಾಂಗ್ರೆಸ್ ಹೀನಾಯ ಸ್ಥಿತಿಯಲ್ಲಿದೆ. ಇಷ್ಟಿದ್ದರೂ ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕೆ ಸಿದ್ದು ಮುಂದಾಗಿ ಪೈಪೋಟಿ ನಡೆಸಿರೋದು ನಾಟಕ, ಹಾಸ್ಯ. ಕಾಂಗ್ರೆಸ್ ನಲ್ಲಿ ಈಗ ಗೊಂದಲ ಶುರುವಾಗಿದೆ, ಬಿಜೆಪಿಯಲ್ಲಿ ಗೊಂದಲ ಇಲ್ಲ ಎಂದರು.

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್​ ಖಂಡಿತ ಟಿಕೆಟ್ ನೀಡುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಅವರನ್ನು ಗೆಲ್ಲಲು ಬಿಡುವುದಿಲ್ಲ. ಸಿದ್ದರಾಮಯ್ಯ, ಖರ್ಗೆ ಹಾಗೂ ಪರಮೇಶ್ವರ್ ಅವರಿಗೆ ದ್ರೋಹ ಮಾಡಿದ್ದು ಖರ್ಗೆ ಮನಸ್ಸಿನಲ್ಲಿ ಇನ್ನೂ ಇದೆ. ಹೀಗಾಗಿ ಈ ಭಾರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸುವುದು ಖಂಡಿತ.

ಸಿದ್ದರಾಮಯ್ಯ ರಾಜ್ಯದ ರಾಜಕೀಯದ ಖಳನಾಯಕ. ಇವರು ಯಾರನ್ನೂ ಬದುಕಲು ಬಿಡುವುದಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ಸೇರಲು ದೇವೇಗೌಡರನ್ನು ತುಳಿದು, ಜೆಡಿಎಸ್​ನಿಂದ ಹೊರಬಂದರು. ಇಂದಿರಾಗಾಂಧಿಯನ್ನು ಕೆಟ್ಟ ಶಬ್ದಗಳಿಂದ ಬೈದವರು, ಸೋನಿಯಾಗಾಂಧಿ ಕಾಲು ಹಿಡಿದು, ಭಿಕ್ಷೆ ಬೇಡಿ ಸಿಎಂ‌ ಆದರು ಎಂದು ಟೀಕಿಸಿದರು.

RELATED TOPICS:
English summary :If Siddaramaiah has Dham, let him contest with almonds

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...