ಆಸಿಡ್ ದಾಳಿಗೊಳಗಾದ ಮಹಿಳೆಗೆ ಸರ್ಕಾರಿ ಕೆಲಸ: ಮುಖ್ಯಮಂತ್ರಿ ಭರವಸೆ | JANATA NEWS
ಬೆಂಗಳೂರು : ಆಸಿಡ್ ದಾಳಿಗೊಳಗಾದ ಮಹಿಳೆಯ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಸಂತ್ರಸ್ತೆಗೆ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ.
ಸರ್ಕಾರಿ ಕೆಲಸ ಹಾಗೂ ಮನೆ ಮಂಜೂರು ಮಾಡಿಕೊಡಬೇಕೆಂಬ ಆಸಿಡ್ ದಾಳಿಗೊಳಗಾದ ಮಹಿಳೆಯ ಬೇಡಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಸ್ಪಂದಿಸಿ, ಮಹಿಳೆಗೆ ಸರ್ಕಾರಿ ಕೆಲಸ ನೀಡುವ ಭರವಸೆ ನೀಡಿದ್ದಾರೆ. ಆಸಿಡ್ ದಾಳಿಗೊಳಗಾದ ಮಹಿಳೆಗೆ ಕೂಡಲೇ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.
ಈಗಾಗಲೇ ಸರ್ಕಾರ ಆ್ಯಸಿಡ್ ದಾಳಿಗೆ ಒಳಗಾಗಿರುವವರಿಗೆ ಮಾಸಾಶನ ಹೆಚ್ಚಿಸಿದೆ. 3 ರಿಂದ 10 ಸಾವಿರಕ್ಕೆ ಮಾಸಾಶನ ಏರಿಸಲಾಗಿದೆ. ಯುವತಿಗೆ ಮಾಸಾಶನವನ್ನೂ ಕೊಡ್ತೇವೆ. ಬೆಂಗಳೂರು ಸಮೀಪ 40 ಸಾವಿರ ಮನೆಗಳ ನಿರ್ಮಾಣ ಆಗ್ತಿದೆ. ಈ ಯುವತಿಗೂ ಒಂದು ಮನೆ ಕೊಡ್ತೇವೆ. ವಸತಿ ಸಚಿವರ ಜತೆ ಮನೆ ಕೊಡುವ ಬಗ್ಗೆ ಹೇಳ್ತೇನೆ ಎಂದು ಸಿಎಂ ಭರವಸೆ ಕೊಟ್ಟಿದ್ದಾರೆ.