ಬಸ್, ಬೈಕ್ ನಡುವೆ ಭೀಕರ ಅಪಘಾತ, ಬೈಕ್ ಸವಾರ ಸಾವು | JANATA NEWS
ಬೆಂಗಳೂರು : ಮೈಸೂರು ಬ್ಯಾಂಕ್ ಸರ್ಕಲ್ ಸಮೀಪ ಕೆಎಸ್ಆರ್ಟಿಸಿ, ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸಾವನ್ನಪ್ಪಿದ್ದಾರೆ.
ಬಿಬಿಎಂಪಿ ನೌಕರರ ವಿ. ಶ್ರೀಧರ್ ಮೃತ ವ್ಯಕ್ತಿ. ಬಸ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಶ್ರೀಧರ್ ನ್ನ ಸ್ಥಳೀಯ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು.
ಹಲಸೂರು ಗೇಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :A terrible accident between a bus and a bike, the biker died