ನಾಳೆಯಿಂದ ರಾಜ್ಯಾಧ್ಯಂತ ಆಂಬ್ಯುಲೆನ್ಸ್ ಸೇವೆ ಸ್ಥಗಿತ | JANATA NEWS
ಬೆಂಗಳೂರು : ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ನಾಳೆಯಿಂದ ಆಂಬುಲೆನ್ಸ್ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ ನಾಳೆಯಿಂದ ರಾಜ್ಯಾಧ್ಯಂತ ಆಂಬುಲೆನ್ಸ್ ಸೇವೆ ಸ್ಥಗಿತಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ನಿರ್ಮಾಣದ ಆತಂಕ ಎದುರಾಗಿದೆ.
ರಾಜ್ಯದಲ್ಲಿ ಆಂಬ್ಯುಲೆನ್ಸ್ ಸೇವೆ ಒದಗಿಸುವ ಜಿವಿಕೆ ಸಂಸ್ಥೆ ಎರಡು ತಿಂಗಳಿಂದ ವೇತನವನ್ನು ಬಾಕಿ ಉಳಿಸಿಕೊಂಡಿದೆ. ಇದರಿಂದ ನೌಕರರ ಸಂಘದ ಆಕ್ರೋಶದ ಕಟ್ಟೆ ಹೊಡೆದಿದ್ದು, ವೇತನ ಪಾವತಿಸುವಂತೆ ಗಡುವು ನೀಡಿದ್ದಾರೆ. ನಾಳೆ ಸಂಜೆ ಒಳಗೆ ಸಂಬಳ ಆಗಿದ್ದರೆ, ಆಂಬ್ಯುಲೆನ್ಸ್ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ನೌಕರರ ಸಂಘ ಎಚ್ಚರಿಕೆ ನೀಡಿದೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿರುವಂತ 108 ಆಂಬುಲೆನ್ಸ್ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಪರಮಶಿವಯ್ಯ ಅವರು, ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಆಂಬುಲೆನ್ಸ್ ಸೇವೆ ಒದಗಿಸುತ್ತಿರುವಂತ ಜಿವಿಕೆ ವೇತನವನ್ನು ಬಾಕಿ ಉಳಿಸಿಕೊಂಡಿದೆ. ವೇತನವಿಲ್ಲದೇ ನೌಕರರು ಸಂಕಷ್ಟಕ್ಕೆ ಸಿಲುಕುವಂತೆ ಆಗಿದೆ. ಈ ಹಿಂದೆ ಅನೇಕ ಬಾರಿ ವೇತನ ಬಿಡುಗಡೆಗೆ ಕೋರಿದ್ದರೂ ನೀಡಿಲ್ಲ. ಈ ಹಿನ್ನಲೆಯಲ್ಲಿ ನಾಳೆ ಸಂಜೆಯೊಳಗೆ ಸಂಬಳ ನೀಡದೇ ಇದ್ದರೇ ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸೋದಾಗಿ ಎಚ್ಚರಿಸಿದ್ದಾರೆ.
ಇದರಿಂದ ರಾಜ್ಯದಲ್ಲಿ ಏನಾದರೂ ಆರೋಗ್ಯ ತುರ್ತು ಪರಿಸ್ಥಿತಿ ಉಂಟಾದರೆ, ಅದಕ್ಕೆ ಜಿವಿಕೆ ಸಂಸ್ಥೆಯೇ ನೇರ ಹೊಣೆ. ಈಗಾಗಲೇ ಸರ್ಕಾರ ಹಣ ಬಿಡುಗಡೆ ಮಾಡಿದೆ. ಸಂಸ್ಥೆಯ ಬಳಿ ಹಣವೂ ಸಹ ಇದೆ. ಸರ್ಕಾರವೂ ಸಹ ಸಂಸ್ಥೆಗೆ ನಿರ್ದೇಶನ ನೀಡಿದೆ. ಇಂದು ಸಂಜೆಯೊಳಗೆ ಜಿವಿಕೆ ಸಂಸ್ತೆ ಸಂಬಳ ಹಾಕುವುದಾಗಿ ಹೇಳಿದೆ ಎನ್ನಲಾಗಿದೆ