Fri,Apr26,2024
ಕನ್ನಡ / English

ಬಾಣಂತಿ ಡಿಸ್ಚಾರ್ಜ್ ಮಾಡಲು 6 ಸಾವಿರ ಫಿಕ್ಸ್, ವಿಡಿಯೋ ವೈರಲ್​, ವೈದ್ಯೆಯರಿಬ್ಬರ ಅಮಾನತು! | JANATA NEWS

26 Nov 2022
2521

ರಾಮನಗರ : ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಬಾಣಂತಿಯನ್ನು ಡಿಸ್ಚಾರ್ಜ್​ ಮಾಡಲು 6 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ ವಿಡಿಯೋ ವೈರಲ್​ ಆಗಿದ್ದು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ರಾಮನಗರದ ಬಿಡದಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದ್ದು, ಬಾಣಂತಿಯನ್ನು ಡಿಸ್ಚಾರ್ಜ್​ ಮಾಡಲು 6 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯೆಯರಿಬ್ಬರನ್ನು ಅಮಾನತು ಮಾಡಲಾಗಿದೆ.

ಬಿಡದಿಯ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ತಜ್ಞೆ ಡಾ. ಶಶಿಕಲಾ ಹಾಗೂ ಡಾ.ಐಶ್ವರ್ಯ ಅವರನ್ನ ಅಮಾನತು ಮಾಡಿ ರಾಮನಗರ ಡಿಎಚ್‌ಒ ಕಾಂತರಾಜ್​ ಆದೇಶ ಹೊರಡಿಸಿದ್ದಾರೆ.

5 ದಿನದ ಹಿಂದೆ ಹೆರಿಗೆಗೆ ರೂಪಾ ಎಂಬುವವರು ದಾಖಲಾಗಿದ್ದರು. ಹೆರಿಗೆಯಾಗಿದ್ದು, ಡಿಸ್ಚಾರ್ಜ್​ ಮಾಡುವಾಗ ವೈದ್ಯೆಯರು 6 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬಿಡದಿಯ ನಿಂಗೇಗೌಡನ ದೊಡ್ಡಿಯ ಮಂಜಪ್ಪ ಅವರು ಅವರ ಪತ್ನಿಯನ್ನು ಬಿಡದಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಹಣದ ಬೇಡಿಕೆ ಇಟ್ಟಿದ್ದ ವೈದ್ಯರಿಗೆ ಎರಡು ಸಾವಿರ ಹಣ ನೀಡಲು ಹೋಗಿದ್ದಾರೆ.

ಅಷ್ಟೊಂದು ಹಣ ಇಲ್ಲ ಮೇಡಂ, ನನ್ನ ಬಳಿ ಇರೋದೇ 2 ಸಾವಿರ ರೂಪಾಯಿ. ನಾನು ಗಾರ್ಮೆಂಟ್ಸ್​ನಲ್ಲಿ ಕೆಲಸ ಮಾಡೋದು, ಇನ್ನೂ ಸಂಬಳ ಕೂಡ ಆಗಿಲ್ಲ. ಇರೋದು 2 ಸಾವಿರ ಮಾತ್ರ, ಹೆಚ್ಚು ಕೊಡಲು ಆಗಲ್ಲ ಮೇಡಂ ಎಂದು ರೂಪಾ ಅವರ ಪತಿ ಹೇಳಿದ್ದಾರೆ.

ಇದಕ್ಕೆ ಒಪ್ಪದ ವೈದ್ಯೆಯರು, ನೀವು ಕೊಡೋ ಹಣವನ್ನು ನಾವು ಎಲ್ಲರಿಗೂ ಹಂಚಬೇಕು. ಪ್ರತಿಯೊಬ್ಬರಿಗೂ ಎರಡು ಸಾವಿರ ರೂ. ಕೊಡಬೇಕು. ಒಬ್ಬರಿಗೊಂದು ಮತ್ತೊಬ್ಬರಿಗೊಂದು ಮಾಡಲ್ಲ, 6 ಸಾವಿರ ಫಿಕ್ಸ್​. 2 ಸಾವಿರ ಅವರಿಗೆ, 2 ಸಾವಿರ ಇವರಿಗೆ, 2 ಸಾವಿರ ನನಗೆ… ಎಂದು ವೈದ್ಯೆ ಹೇಳಿದ್ದಾರೆ. ನೀವು ಕೊಡೋ 2 ಸಾವಿರದಲ್ಲಿ ಎಲ್ಲರಿಗೂ 500 ಕೊಡೋಕೆ ಆಗುತ್ತಾ? ಆಗಲ್ಲ 6 ಸಾವಿರ ಕೊಡಿ, ನಾವು ಕಮ್ಮಿ ತಗೊಂಡ್ರೆ ವಾರ್ಡ್​ನಲ್ಲಿ ಬೇರೆಯವರಿಗೆ ಗೊತ್ತಾದ್ರೆ ಎಲ್ಲರೂ ಅಷ್ಟೇ ಕೊಡ್ತಾರೆ… ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಿಎಚ್​ಒ, ವೈದ್ಯೆಯರಿಗೆ ನೋಟಿಸ್ ನೀಡಲಾಗಿದೆ. ಲಂಚ ಪಡೆಯುತ್ತಿರುವ ಬಗ್ಗೆ ವಿಡಿಯೋದಲ್ಲಿ ಸ್ಪಷ್ಟವಾಗಿದೆ. ಹಾಗಾಗಿ ಇಬ್ಬರನ್ನೂ ಅಮಾನತು ಮಾಡಿದ್ದೇವೆ. ಈ ಬಗ್ಗೆ ಸಂಪೂರ್ಣ ವರದಿ ಸಂಗ್ರಹಿಸಿ ಕ್ರಮ ಕೈಗೊಳ್ಳುತ್ತೇವೆ. ಈ ಪ್ರಕರಣ ಸಂಬಂಧ ಇಬ್ಬರು ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ‌. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

RELATED TOPICS:
English summary :6 thousand fix to discharge Baranti, video viral, suspension of two doctors!

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...