ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ | JANATA NEWS
ಚಿಕ್ಕಮಗಳೂರು : ದತ್ತ ಜಯಂತಿ ಹಿನ್ನೆಲೆ ಶಾಸಕ ಸಿಟಿ ರವಿ ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದರು. ಪಡಿ ಸಂಗ್ರಹಕ್ಕೆ ಮನೆಗೆ ಬಂದ ದತ್ತಮಾಲಾಧಾರಿಗಳಿಗೆ ಜನರು ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವಿಳ್ಯೆದೆಲೆ ಅಡಿಕೆ -ಬೆಲ್ಲ ನೀಡಿ ಸ್ವಾಗತಿಸಿದರು.
20ಕ್ಕೂ ಹೆಚ್ಚು ಮಾಲಾಧಾರಿಗಳ ಜೊತೆಗೆ ಶಾಸಕ ಸಿ.ಟಿ. ರವಿ ಪಡಿ ಸಂಗ್ರಹ ಮಾಡಿದರು. ಬುಧವಾರ ಮಧ್ಯಾಹ್ನ ನಗರದಲ್ಲಿ 30 ಸಾವಿರಕ್ಕೂ ಅಧಿಕ ದತ್ತ ಭಕ್ತರಿಂದ ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಹಾಗಾಗಿ, ಮುಂಜಾಗೃತ ಕ್ರಮವಾಗಿ ಶೋಭಾಯಾತ್ರೆ ತೆರಳುವ ಮಾರ್ಗದಲ್ಲಿ ಪಾರ್ಕಿಂಗ್ ರದ್ದು ಮಾಡಿದ್ದು, ಬೆಳಗ್ಗೆಯಿಂದಲೂ ಪೊಲೀಸರು ಕಾವಲಿದ್ದು, ಖಾಕಿ ಪಡೆ ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿದ್ದಾರೆ.
ಬಿಜೆಪಿ ನಾಯಕರ ಹೆಸರಿಗೆ ಮುಸ್ಲಿಂ ಹೆಸರನ್ನು ಹಾಕಿ ಕಾಂಗ್ರೆಸ್ ಟ್ವೀಟ್ ಮಾಡ್ತಿರೋ ವಿಚಾರಕ್ಕೆ ಸಂಬಂಧಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರ ಸ್ವಭಾವ ಹಾಗೆ ಇದ್ರೆ ಕಾಂಗ್ರೆಸ್ನವರು ಖಂಡಿತ ಕರೆಯಲಿ. ನನ್ನನ್ನು ಮುಲ್ಲಾ ಅಂತ ಕರೆಯೋಕ್ಕಾಗಲ್ಲ, ಹಿಂದೂ ಹುಲಿ ಅಂತಾನೇ ಕರೆಯಬೇಕು. ನನ್ನ ಮುಲ್ಲಾ ಅಂತ ಕರೆದ್ರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ. ಸ್ವಭಾವಕ್ಕೆ ತಕ್ಕಂತೆ ಬಿರುದುಗಳು ನಮಗೆ ಬರುತ್ತದೆ. ಪರ್ಷಿಯನ್ ಭಾಷೆಯನ್ನ ಆಡಳಿತ ಭಾಷೆಯನ್ನಾಗಿ ಮಾಡಿದವನನ್ನ ಕನ್ನಡ ಪ್ರೇಮಿ ಅಂತ ಹೇಳಕ್ಕಾಗುತ್ತಾ.? ಹಾಗೆ ಹೇಳಿದ್ರೆ ಅದಕ್ಕಿಂತ ಅಪಪ್ರಚಾರ ಬೇರೆ ಏನಿದೆ ಎಂದು ಹೇಳಿದರು.
ಮುಲ್ಲಾ ಅನ್ನೋ ಹೆಸರು ಯಾರಿಗೆ ಕನೆಕ್ಟ್ ಆಗುತ್ತೆ ಅಂದ್ರೆ, ಶಾದಿ ಭಾಗ್ಯ, ದೇ ಆರ್ ಆಲ್ ಮೈ ಬ್ರದರ್ಸ್ ಅನ್ನೋರಿಗೆ ಕನೆಕ್ಟ್ ಆಗುತ್ತೆ. ಬೆಂಕಿ ಹಾಕಿದ್ರು ಕೂಡ ಅಮಾಯಕರು ಅನ್ನೋರಿಗೆ ಕನೆಕ್ಟ್ ಆಗುತ್ತೆ. ಕೇಸರಿ, ಕುಂಕುಮವನ್ನ ದೂಡಿ ಟೋಪಿಯನ್ನ ಪ್ರೀತಿಯಿಂದ ಹಾಕಿಕೊಳ್ಳುವವರಿಗೆ ಕನೆಕ್ಟ್ ಆಗುತ್ತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೆಸರೇಳದೆ ಸಿ.ಟಿ. ರವಿ ಕುಟುಕಿದರು.