ಹೃದಯಾಘಾತದಿಂದ ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಸಾವು, ಸ್ವಲ್ಪದರಲ್ಲೇ ತಪ್ಪಿದ ಅನಾಹುತ | JANATA NEWS
ಬೆಂಗಳೂರು : ರಾಜ್ಯಪಾಲರನ್ನು ಕರೆದೊಯ್ಯಲು ಬಂದಿದ್ದ ಗೌರ್ನರ್ ಕಾರು ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ರವಿಕುಮಾರ್ ಎಸ್. ಕಾಳೆ ಮೃತಪಟ್ಟ ಕಾರು ಚಾಲಕ. ಹುಬ್ಬಳಿಯಿಂದ ತಡರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಗಮಿಸಿದ್ದರು. ಈ ವೇಳೆ ಅವರನ್ನು ಕಾರಿನಲ್ಲಿ ಕರೆದೊಯ್ಯಲು ಚಾಲಕ ರವಿಕುಮಾರ್ ಬಂದಿದ್ದರು.
ರಾಜ್ಯಪಾಲರನ್ನು ಕಾರಿನಲ್ಲಿ ಕರೆದೊಯ್ಯಲು ಸಿದ್ದತೆ ಮಾಡಿಕೊಳ್ಳುವ ವೇಳೆ ರವಿಕುಮಾರ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಹೃದಯಾಘಾತವೂ ಆಗಿದೆ.
ಕಾರು ಚಾಲಕನಿಗೆ ಎದೆನೋವು ಕಾಣಿಸುತ್ತಿದ್ದಂತೆ ತಕ್ಷಣ ಆಂಬುಲೆನ್ಸ್ನಲ್ಲಿ ಕರೆದೊಯ್ಯಲಾಗಿದೆ. ಆದರೆ ದಾರಿ ಮಧ್ಯೆಯೇ ಚಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.