ಬಿಲ್ಡಿಂಗ್ ಬಾಡಿಗೆ ಕೇಳಿದ್ದಕ್ಕೆ ಅಧಿಕಾರಿಗಳ ಎದುರು ಮಚ್ಚು ಹಿಡಿದು ಮಹಿಳೆಯ ರಂಪಾಟ | JANATA NEWS
ಮೈಸೂರು : ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದ ಬಾಡಿಗೆ ಬಾಕಿ ಹಣ ಪಾವತಿಸುವಂತೆ ನೋಟಿಸ್ ನೀಡಿದ ಅಧಿಕಾರಿಗಳಿಗೆ ಬಾಡಿಗೆದಾರನ ಪತ್ನಿ ಮಚ್ಚು ಹಿಡಿದು ರಂಪಾಟ ಮಾಡಿದ ಘಟನೆ ನಗರದ ಸಾತಗಳ್ಳಿ ಬಸ್ ಡಿಪೋದಲ್ಲಿ ನಡೆದಿದೆ.
ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಶಫೀಕ್ ಅಹಮದ್ ಎಂಬುವರು 12 ವರ್ಷಗಳ ಅವಧಿಗೆ ಬಾಡಿಗೆಗೆ ಪರವಾನಗಿ ಪಡೆದಿದ್ದರು. ಆದರೆ ಬಾಡಿಗೆ ಹಣ ಬಾಕಿ ಉಳಿಸಿಕೊಂಡಿದ್ದರು. ಇದರ ಒಪ್ಪಂದವು ಇತ್ತೀಚೆಗೆ ಡಿ.10ರಂದು ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಬಾಕಿ ಉಳಿದ 1 ಕೋಟಿ 80 ಲಕ್ಷ ಹಣ ಪಾವತಿಸುವಂತೆ ಸಂಬಂಧಿಸಿದ ಅಧಿಕಾರಿಗಳು ನೋಟಿಸ್ ನೀಡಿದ್ದರು.
ತನ್ವೀರ್ ಸೇಠ್ ಬೆಂಬಲಿಗ ಷಫಿ ಅಹಮದ್ ಹಾಗೂ ಅವರ ಪತ್ನಿ ಇಬ್ಬರು ಮೈಸೂರಿನಸಾತಗಳ್ಳಿ ಬಸ್ ಡಿಪೋದಲ್ಲಿ ರಂಪಾಟ ಮಾಡಿದ್ದಾರೆ. KSRTC ಬಸ್ ನಿಲ್ದಾಣದ ಕಟ್ಟಡವನ್ನು ಬಾಡಿಗೆಗೆ ಪಡೆದಿರುವ ಷಫಿ ಅಹಮದ್, 1 ಕೋಟಿ 80 ಲಕ್ಷ ರೂ. ಬಾಡಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಗಂಡ ಹೆಂಡತಿ ಇಬ್ಬರು ಖಾಸಗಿ ಶಾಲೆ ನಡೆಸಲು KRSTC ಬಸ್ ನಿಲ್ದಾಣದ ಕಟ್ಟಡವನ್ನು ಬಾಡಿಗೆಗೆ ಪಡೆದಿದ್ದರು.
ಪೇಪರ್ ಕವರ್ ನಲ್ಲಿ ಮಚ್ಚು ತಂದಿದ್ದ ಷಫಿ ಪತ್ನಿ. ಪೊಲೀಸರ ಎದುರೇ ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದಾರೆ. ನಾವು ಮುಸ್ಲಿಮರು ಎಂದು ಜೋರಾಗಿ ಕೂಗಿಕೊಳ್ಳುತ್ತಾ, ನಾವು ಮಚ್ಚಿನಲ್ಲಿ ಕೊಚ್ಚಿ ಹಾಕಿ ಜೈಲಿಗೆ ಹೋಗಲು ರೆಡಿ ಎಂದು ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ.
ಈ ದೃಶ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ವೈರಲ್ ಆಗಿದೆ. ಘಟನೆ ಸಂಬಂಧ ದಂಪತಿ ವಿರುದ್ಧ ಅಧಿಕಾರಿಗಳು ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.