ಹುಬ್ಬಳ್ಳಿ ಮತ್ತು ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ : ತೀವ್ರಗೊಂಡ ಕಾರ್ಯ | JANATA NEWS
ಬೆಂಗಳೂರು : ಪ್ರಸ್ತುತ ಅತಿವೇಗದ ರೈಲು ಎಂದೇ ಪ್ರಖ್ಯಾತಿ ಪಡೆದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಯನ್ನು ರಾಜ್ಯದಲ್ಲಿ ಎರಡನೇ ಭಾರಿಗೆ ಧಾರವಾಡ-ಹುಬ್ಬಳ್ಳಿ ಮತ್ತು ಬೆಂಗಳೂರು ನಡುವೆ ಮಾರ್ಚ್ 2023 ರ ವೇಳೆಗೆ ಪರಿಚಯಿಸಲಾಗುವುದು.
ನಿಗದಿ ಪಡಿಸಲಾದ ಗುರಿ ತಲುಪುವ ನಿಟ್ಟಿನಲ್ಲಿ ಕೇಂದ್ರ ರೇಲ್ವೆ ಸಚಿವಾಲಯ ಹುಬ್ಬಳ್ಳಿ ಬೆಂಗಳೂರು ನಡುವಿನ ಮಾರ್ಗದಲ್ಲಿ ರೇಲ್ವೆ ಲೈನ ಡಬಲಿಂಗ್ ಸೇರಿದಂತೆ ಸಂಬಂಧಪಟ್ಟ ಕಾರ್ಯ ತೀವ್ರವಾಗಿ ನಿರ್ವಹಿಸುತ್ತಿದೆ ಎನ್ನಲಾಗಿದೆ.
ಕೇಂದ್ರ ಸಂಸತ್ ವ್ಯವಹಾರಗಳ ಹಾಗೂ ಕಲ್ಲಿದ್ದಲು, ಗಣಿ ಖಾತೆ ಸಚಿವ ಪ್ರಹ್ಲಾದ ಜೋಶಿ ಅವರು ಮಾಹಿತಿ ಹಂಚಿಕೊಂಡಿದ್ದು, "ನಮ್ಮ ಧಾರವಾಡ- ಹುಬ್ಬಳ್ಳಿಯಿಂದ ಬೆಂಗಳೂರಿಗೆ ಅತ್ಯಾಧುನಿಕ, ಅತಿವೇಗದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ಸಂಚಾರಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಕೇಂದ್ರ ರೇಲ್ವೆ ಸಚಿವಾಲಯ ತೀವ್ರವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಈಗ ಹಾವೇರಿ ಮತ್ತು ಬ್ಯಾಡಗಿ ರೈಲು ನಿಲ್ದಾಣಗಳ ಮಧ್ಯ ಹಳಿಗೆ ವೇಗ ನಿಯಂತ್ರಕವನ್ನು ತೆಗೆಯುವ ಮತ್ತು ಹೆಚ್ಚಿನ ವೇಗಕ್ಕೆ ಅನಕೂಲವಾಗುವ ಕಾರ್ಯ ಆರಂಭವಾಗಿದೆ.
ಇದರಿಂದ ಗಂಟೆಗೆ 130 ಕಿ.ಮೀ ವೇಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಅನಕೂಲವಾಗಲಿದೆ ಹಾಗೂ ರೇಲ್ವೆ ಲೈನ ಡಬಲಿಂಗ್ ಮುಗಿದ ನಂತರ ಉಳಿದ ರೈಲುಗಳಿಗೂ ವೇಗ ವರ್ಧಿಸಲು ಅನಕೂಲವಾಗಲಿದೆ.