ಚಿಕನ್ ರೋಲ್ ಕೊಟ್ಟಿಲ್ಲ ಎಂದು ಹೋಟೆಲ್ ಸಿಬ್ಬಂದಿ ಕೋಣೆಗೆ ಪುಂಡರು ಬೆಂಕಿ | JANATA NEWS
ಬೆಂಗಳೂರು : ಚಿಕನ್ ರೋಲ್ ಕೊಟ್ಟಿಲ್ಲ ಎಂದು ಹೋಟೆಲ್ ಸಿಬ್ಬಂದಿ ಕೋಣೆಗೆ ಪುಂಡರು ಬೆಂಕಿ ಹಾಕಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ತಡರಾತ್ರಿ ಚಿಕನ್ ರೋಲ್ ಕೇಳ್ಕೊಂಡು ಹನುಮಂತನಗರದ ಕುಮಾರ್ ಹೋಟೆಲ್ಗೆ ಮೂವರು ಯುವಕರು ಬಂದಿದ್ದಾರೆ. ಹೋಟೆಲ್ ಸಿಬ್ಬಂದಿ ಇಲ್ಲ ಎಂದಿದ್ದಕ್ಕೆ ಯುವಕರ ನಡುವೆ ಮಾತಿನ ಚಕಮಕಿ ಆಗಿ ಗಲಾಟೆಗೆ ನಡೆದಿದೆ.
ಇದೇ ವಿಷಯಕ್ಕೆ ಹೋಟೆಲ್ ಸಿಬ್ಬಂದಿ ಹಾಗೂ ದೇವರಾಜ್ ಟೀಂ ನಡುವೆ ಗಲಾಟೆ ಆಗಿದೆ. ಗಲಾಟೆ ವೇಳೆ ಮದ್ಯದ ಅಮಲಿನಲ್ಲಿದ್ದ ಮೂವರನ್ನು ಥಳಿಸಿದ ಹೋಟೆಲ್ ಸಿಬ್ಬಂದಿ ಹೊರಗೆ ಕಳುಹಿಸಿ ಬಾಗಿಲು ಹಾಕಿದ್ದಾರೆ.
ಏಟು ತಿಂದ ಬಳಿಕ ದೇವರಾಜ್ ಅಂಡ್ ಟೀಂ ದೇವೇಗೌಡ ಪೆಟ್ರೋಲ್ ಬಂಕ್ಗೆ ಹೋಗಿದ್ದಾರೆ. ಅಲ್ಲಿ ಪೆಟ್ರೋಲ್ ಖರೀದಿಸಿದ್ದಾರೆ. ಹೋಟೆಲ್ ಪಕ್ಕದಲ್ಲಿಯೇ ಇರುವ ಸಿಬ್ಬಂದಿ ವಾಸವಾಗಿರೋದನ್ನು ತಿಳಿದ ದೇವರಾಜ್ ಆಂಡ್ ಟೀಂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಅದೃಷ್ಟವಶಾತ್ ರೂಮ್ನಲ್ಲಿ ವಾಸವಿದ್ದ ಹೋಟೆಲ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆರೋಪಿಗಳಾದ ದೇವರಾಜ್ ಹಾಗೂ ಗಣೇಶ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.