Mon,May13,2024
ಕನ್ನಡ / English

ನಮ್ಮ ಕ್ಲಿನಿಕ್ ಲೋಕಾರ್ಪಣೆಗೊಳಿಸಿದ ಸಿಎಂ, 114 ನಮ್ಮ ಕ್ಲಿನಿಕ್ ರಾಜ್ಯಾದ್ಯಂತ ಲೋಕಾರ್ಪಣೆ | JANATA NEWS

14 Dec 2022
2310

ಧಾರವಾಡ : ಒಂದೇ ಸೂರಿನಡಿ 12 ವಿವಿಧ ಆರೋಗ್ಯ ಸೇವೆಗಳನ್ನು ಒದಗಿಸುವ ರಾಜ್ಯಾದ್ಯಂತ 114 ‘ನಮ್ಮ ಕ್ಲಿನಿಕ್’ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿಯವರು ಹುಬ್ಬಳ್ಳಿಯಲ್ಲಿ ಇಂದು ಲೋಕಾರ್ಪಣೆಗೊಳಿಸಿದರು.

ಹುಬ್ಬಳ್ಳಿ-ಧಾರವಾಡ ನಗರದ ಬೈರಿದೇವರಕೊಪ್ಪದಲ್ಲಿ ನಡೆದ ಬೃಹತ್​​ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಪ್ರಾಥಮಿಕ ಹಂತದಲ್ಲೇ ಉತ್ತಮ ಚಿಕಿತ್ಸೆ ಸಿಗುವಂತೆ ಮಾಡಿದ್ದೇವೆ. ಈ ಬಜೆಟ್ ನಲ್ಲಿ ನಮ್ಮ ಕ್ಲಿನಿಕ್ ಗೆ ಹೆಚ್ಚು ಒತ್ತು ನೀಡಲಿದ್ದೇವೆ.

ಬಡವರಿಗೆ ಅನುಕೂಲವಾಗಲು ನಮ್ಮ ಕ್ಲಿನಿಕ್ ತೆರೆಯಲಾಗುತ್ತಿದೆ. ಜನವರಿ ಅಂತ್ಯದೊಳಗೆ ರಾಜ್ಯದಲ್ಲಿ 437 ನಮ್ಮ ಕ್ಲಿನಿಕ್ ಆರಂಭ ಮಾಡಲಾಗುವುದು ಎಂದು ತಿಳಿಸಿದರು. ಮೊದಲ ಹಂತದಲ್ಲಿ ಸುಮಾರು 438 ನಮ್ಮ ಕ್ಲಿನಿಕ್ ಆರಂಭಿಸಲಾಗುತ್ತಿದೆ. ಜನೆವರಿ ಅಂತ್ಯದೊಳಗೆ ಈ ಎಲ್ಲ ಕ್ಲಿನಿಕ್ ಗಳನ್ನು ಆರಂಭಗೊಳಿಸಲಾಗುವುದು ಎಂದರು.

ರಾಜ್ಯದ ರೈತರಿಗೆ ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ತಂದಿದ್ದೇವೆ. ಸಮುದಾಯ ಆಸ್ಪತ್ರೆಗಳಿಗೆ ಮತ್ತಷ್ಟು ಅನುದಾನ ನೀಡಲು ನಿರ್ಧರಿಸಿದ್ದೇವೆ. ರಾಜ್ಯದಲ್ಲಿ 40 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರಂಭಿಸಲಾಗುತ್ತದೆ. ಜನವರಿ ತಿಂಗಳಿಂದ 60 ವರ್ಷ ದಾಟಿದವರಿಗೆ ಕಣ್ಣಿನ ತಪಾಸಣೆ ನಡೆಸುತ್ತೇವೆ. ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆಗೆ ಅಡಿಗಲ್ಲು ಹಾಕುತ್ತೇವೆ ಎಂದು ತಿಳಿಸಿದರು.

ಯೋಜನೆಗೆ ಚಾಲನೆ ನೀಡಿದ ಬಳಿಕ ಹುಬ್ಬಳ್ಳಿಯಿಂದ ದೆಹಲಿಗೆ ಹೊರಡುತ್ತಿದ್ದು, ಗಡಿ ವಿಚಾರದಲ್ಲಿ ನಮ್ಮ ನಿಲುವನ್ನು ಗೃಹ ಸಚಿವ ಅಮಿತ್ ಶಾ ಅವರಿಗೆ ಸ್ಪಷ್ಟಪಡಿಸ್ತೇನೆ ಎಂದು ತಿಳಿಸಿದರು.

ನಮ್ಮ ಕ್ಲಿನಿಕ್​ಗಳಲ್ಲಿ 12 ರೀತಿಯ ವೈದ್ಯಕೀಯ ಸೇವೆಗಳು ಲಭ್ಯವಿದೆ. ಪ್ರತಿ ನಮ್ಮ ಕ್ಲಿನಿಕ್​ನಲ್ಲಿಯೂ ವೈದ್ಯಕೀಯ ಅಧಿಕಾರಿ, ನರ್ಸ್, ಲ್ಯಾಬ್ ಟೆಕ್ನೀಷಿಯನ್ ಮತ್ತು ಗ್ರೂಪ್ ಡಿ ನೌಕರ ಇರುತ್ತಾರೆ.

12 ಪ್ರಮುಖ ಸೇವೆ -
* ಗರ್ಭಿಣಿ ಆರೈಕೆ
* ಶಿಶುವಿನ ಆರೈಕೆ
* ಮಕ್ಕಳ ಸೇವೆ
* ಕುಟುಂಬ ಕಲ್ಯಾಣ ಸೇವೆ
* ಸಾಂಕ್ರಾಮಿಕ ರೋಗಗಳ ನಿರ್ವಹಣೆ
* ಸಂಪೂರ್ಣ ಓಪಿಡಿ ಸೇವೆಗಳು
* ಮಧುಮೇಹ, ರಕ್ತದೊತ್ತಡ ಚೆಕ್ ಅಪ್
* ಕ್ಯಾನ್ಸರ್ ಸ್ಕ್ರೀನಿಂಗ್ ಸೇವೆ
ಬಾಯಿ ಆರೋಗ್ಯ ಸಮಸ್ಯೆಗಳು ಸೇವೆ
* ಕಣ್ಣಿನ ತಪಾಸಣೆ
* ಮೂಗು, ಗಂಟಲು ENT ಸೇವೆಗಳು
* ಮಾನಸಿಕ ಆರೋಗ್ಯ ಸ್ಕ್ರೀನಿಂಗ್ ಸೇವೆ
* ವೃದ್ಧಾಪ್ಯ ಆರೈಕೆ
ತುರ್ತು ವೈದ್ಯಕೀಯ ಸೇವೆ ಸೇರಿದಂತೆ ಒಟ್ಟು 12 ಪ್ರಮುಖ ಆರೋಗ್ಯ ಸೇವೆಗಳು ನಮ್ಮ ಕ್ಲಿನಿಕ್ ನಲ್ಲಿ ಲಭ್ಯವಿರಲಿದ್ದು, ಎಲ್ಲಾ ಸೇವೆಗಳು ಉಚಿತವಾಗಿ ಸಿಗಲಿದೆ.

RELATED TOPICS:
English summary :Our Clinic Lokarpana CM, 114 Our Clinic Lokarpana across the state

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...