ಭೀಕರ ಅಪಘಾತ: ತಂದೆ-ತಾಯಿ-ಮಗ ಸೇರಿ ನಾಲ್ವರು ದುರ್ಮರಣ | JANATA NEWS
ತುಮಕೂರು : ಕ್ಯಾಂಟರ್ ಲಾರಿ, ಇಂಡಿಕಾ ಕಾರು ಮುಖಾಮುಖಿ ಡಿಕ್ಕಿಯಾಗಿ ಮಹಿಳೆ ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ಗುಬ್ಬಿ ತಾಲ್ಲೂಕಿನ ಕೊಂಡ್ಲಿ ಕ್ರಾಸ್ ಬಳಿ ನಡೆದಿದೆ..
ನಾರಾಯಣಪ್ಪ (50), ಇವರ ಪತ್ನಿ ನಾಗರತ್ನ(45), ಮಗ ಸಾಗರ್ (21) ಮತ್ತು ಸಂಬಂಧಿ ರಾಮಣ್ಣ (25) ಮೃತ ದುರ್ದೈವಿಗಳು.
ಮೃತರೆಲ್ಲರೂ ಚಿಕ್ಕನಾಯಕನಹಳ್ಳಿ ತಾಲೂಕಿನ ನಡುವಿನಹಳ್ಳಿ ಗ್ರಾಮದವರು. ತುಮಕೂರಿನಿಂದ ಕೆಬಿಕ್ರಾಸ್ ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ಲಾರಿ, ತುಮಕೂರು ಕಡೆಗೆ ಬರುತ್ತಿದ್ದ ಇಂಡಿಕಾ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾರಾಯಣಪ್ಪ ಅವರ ಪತ್ನಿ ನಾಗರತ್ನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಗುಬ್ಬಿ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.