ಕಾಂಗ್ರೆಸ್ ಭಯೋತ್ಪಾದಕರ ಪರವೋ ಅಥವಾ ದೇಶಭಕ್ತರ ಪರವೋ ಎನ್ನುವುದನ್ನು ಸ್ಪಷ್ಟಪಡಿಸಲಿ | JANATA NEWS
ಬೆಂಗಳೂರು : ಕಾಂಗ್ರೆಸ್ ಪಕ್ಷದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರು, ದೇಶದಲ್ಲಿ ಅಶಾಂತಿ ಉಂಟುಮಾಡುವ ಭಯೋತ್ಪಾದಕರ ಪರವೋ ಅಥವಾ ದೇಶವನ್ನು ಉಳಿಸುವ ದೇಶಭಕ್ತರ ಪರವೋ ಎನ್ನುವುದನ್ನು ಸ್ಪಷ್ಟಪಡಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಜಯ್ ದಿವಸ್ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸೈನಿಕ ಸ್ಮಾರಕಕ್ಕೆ ಸಿಎಂ ಗೌರವ ಸಲ್ಲಿಸಿ, ಮಾತನಾಡಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿ ಬಾರಿ ದೇಶದ ನೈತಿಕತೆ, ಪೊಲೀಸ್ ಇಲಾಖೆಯ ನೈತಿಕತೆ ಕಡಿಮೆ ಮಾಡುವಂತೆ ಮಾತನಾಡುವುದು ದೇಶಭಕ್ತರ ಕೆಲಸವಲ್ಲ. ಇದನ್ನು ಸ್ಪಷ್ಟವಾಗಿ ಹೇಳಿದರೆ ಜನ ತೀರ್ಮಾನ ಮಾಡುತ್ತಾರೆ. ಭಯೋತ್ಪಾದಕರು ಸಾಕ್ಷಿ ಸಮೇತ ಸಿಕ್ಕಾಗ ಅದರ ಪ್ರಕ್ರಿಯೆ ಹಾಗೂ ತನಿಖೆಯನ್ನೇ ಪ್ರಶ್ನೆ ಮಾಡುವುದು ಭಯೋತ್ಪಾದಕ ಸಂಘಟನೆಗಳಿಗೆ ನೈತಿಕ ಬಲ ತಂದುಕೊಡುತ್ತದೆ ಎಂದರು.
ಒಬ್ಬ ವ್ಯಕ್ತಿ ಬಾಂಬ್ಗೆ ಬೇಕಾದ ವಸ್ತುಗಳನ್ನು ಕುಕ್ಕರ್ನಲ್ಲಿ ಹಾಕಿಕೊಂಡು ಹೋಗುವಾಗ ಸ್ಪೋಟವಾಗಿದೆ. ಮಂಗಳೂರಿನಲ್ಲಿ ಸ್ಪೋಟ ಮಾಡೋ ಉದ್ದೇಶ ಸ್ಪಷ್ಟವಾಗಿದೆ. ಅವನು ಹತ್ತು ಹಲವು ಹೆಸರು ಬದಲಾವಣೆ ಮಾಡಿದ್ದ. ಹಿಂದೆ 2-3 ಕೇಸ್ನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಅವನು ಭಯೋತ್ಪಾದಕ ಸಂಪರ್ಕ ಇರೋದು ಸಾಬೀತಾಗಿದೆ. ಭಯೋತ್ಪಾದಕರ ಜೊತೆ ಲಿಂಕ್ ಇರೋದು ಸ್ಪಷ್ಟವಾಗಿದೆ.
ಭ್ರಷ್ಟಾಚಾರ ಪ್ರಾರಂಭ ಆಗಿದ್ದೇ ಕಾಂಗ್ರೆಸ್ನಿಂದ. ಶಾರಿಕ್ಗೆ ಮಂಗಳೂರಿನಲ್ಲಿ ಬ್ಲಾಸ್ಟ್ ಮಾಡೋ ಉದ್ದೇಶ ಪಕ್ಕಾ ಇತ್ತು. ಅದಕ್ಕೆ ಎಲ್ಲಾ ತಯಾರಿ ಮಾಡಿದ್ರು. ಡಿ.ಕೆ.ಶಿವಕುಮಾರ್ ಆಕಸ್ಮಿಕ ಅಂತಾರೆ. ಇದು ಅವರಿಗೆ ಶೋಭೆ ತರೋದಿಲ್ಲ. ಚುನಾವಣೆಯ ತುಷ್ಠೀಕರಣದ ತಂತ್ರ ಇದು. ಇದು ಕಾಂಗ್ರೆಸ್ನ ಹಳೆಯ ತಂತ್ರ. ಈಗ ಇದೆಲ್ಲ ನಡೆಯೋದಿಲ್ಲ ಎಂದು ವಾಗ್ದಾಳಿ ನಡೆಸಿದರು.