ಅರೆ ಬೆತ್ತಲೆ ಫೋಟೋ ಕಳಿಸಿ ಪುರುಷರಿಂದ ಹಣ ಪೀಕುತ್ತಿದ್ದ ಖತರ್ನಾಕ್ ಲೇಡಿ ಬಂಧನ | JANATA NEWS
ಮೈಸೂರು : ಅರೆ ಬೆತ್ತಲೆ ಫೋಟೋ ಕಳಿಸಿ ಯುವಕ, ಪುರುಷರನ್ನ ಬುಟ್ಟಿಗೆ ಬೀಳಿಸಿ ಹಣ ವಸೂಲಿ ಮಾಡುತ್ತಿದ್ದ ಖತರ್ನಾಕ್ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಪಿರಿಯಾಪಟ್ಟಣ ತಾಲೂಕಿನ ಸವಿತಾ ಆಲಿಯಾಸ್ ಮಂಜುಳ ಯಾದವ್ ಮೈಸೂರಿನಲ್ಲಿ ವಾಸವಾಗಿದ್ದಾಳೆ.
ವಾಟ್ಸ್ ಅಫ್ ಚಾಟ್ ಮಾಡಿ ತನ್ನ ಅರೆ ನಗ್ನ ಫೋಟೋಗಳನ್ನ ಸೆಂಡ್ ಮಾಡಿ ಪುರುಷರು, ಯುವಕರನ್ನು ತನ್ನ ಮಾಯಾ ಜಾಲಕ್ಕೆ ಸಿಲುಕುವಂತೆ ಮಾಡುತ್ತಿದ್ದಳು ಎನ್ನಲಾಗಿದೆ.
ಈಕೆ ಅಮಾಯಕರನ್ನು ಯಾಮಾರಿಸಿ ಲಕ್ಷ ಲಕ್ಷ ಹಣ ಕೀಳುತ್ತಿದ್ದಳು. ಇದೇ ರೀತಿ ಮೈಸೂರಿನಲ್ಲಿ ಪರಿಚಯಸ್ಥ ದಂಪತಿಗೆ ಯಾಮಾರಿಸಿ ಲಕ್ಷ ಹಣ ಪೀಕಿದ್ದಾಳೆ. ಬಳಿಕ ಕೊಟ್ಟ ಹಣವನ್ನು ಕೇಳುವುದಕ್ಕೆ ಬಂದ ದಂಪತಿ ಮೇಲೆ ಹಲ್ಲೆ ಮಾಡಲು ಹೋಗಿದ್ದಾಳೆ. ಇನ್ನೂ ಸಾಲ ಕೇಳಲು ಹೋದರೆ ಬೆತ್ತಲೆ ಫೋಟೋ ಕಳುಹಿಸಿ ಬ್ಲಾಕ್ ಮೇಲ್ ಮಾಡಿದ್ದಾರೆ.
ಅಲ್ಲದೆ ವಿಜಯನಗರ 2ನೇ ಹಂತದ ವಾಟರ್ ಟ್ಯಾಂಕ್ ಬಳಿಯ ಅಭಿಷೇಕ್ ರಸ್ತೆಯಲ್ಲಿರುವ ಸ್ಪಾ ಹೆಸರಲ್ಲಿ ವೈಶ್ಯವಾಟಿಕೆ ದಂಧೆ ನಡೆಸಿರುವ ಆರೋಪ ಕೂಡ ಈಕೆ ಮೇಲೆ ಕೇಳಿ ಬಂದಿದೆ. ವಿಜಯನಗರ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.