ಅಮಾಯಕ ಪ್ರಶಸ್ತಿ ಪಡೆಯಲು ನಾನು ರೆಡಿ, ಯಾವಾಗ ಕೊಡ್ತೀರಾ ಹೇಳಿ: ಡಿಕೆಶಿ | JANATA NEWS
ಹುಬ್ಬಳ್ಳಿ : ಸಚಿವ ಆರ್. ಅಶೋಕ್ ನನಗೆ ಅಮಾಯಕನ ಅವಾರ್ಡ್ ಕೊಡುವುದಾಗಿ ಹೇಳಿದ್ದಾರೆ. ಅಮಾಯಕ ಅವಾರ್ಡ್ ತೆಗೆದುಕೊಳ್ಳಲು ನಾನು ಸಿದ್ಧನಿದ್ದೇನೆ. ಅಶೋಕ್ ಡೇಟ್, ಟೈಮ್ ಫಿಕ್ಸ್ ಮಾಡಲಿ ಎಂದು ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕುಕ್ಕರ್ ಬ್ಲಾಸ್ಟ್ ವಿಚಾರದಲ್ಲಿ ನನ್ನ ಬಗ್ಗೆ ಯಾರು ಬೇಕಾದ್ರೂ, ಏನಾದ್ರು ಪ್ರಚಾರ ಮಾಡ್ಲಿ. ನಮ್ಮದು ಕಾಂಗ್ರೆಸ್ ಪಕ್ಷ, ಭಯೋತ್ಪಾದನೆಯನ್ನು ವಿರೋಧಿಸುತ್ತಾ ಬಂದಿರುವ ಪಕ್ಷ. ಅಧಿಕಾರದಲ್ಲಿ ಇದ್ದಾಗೆಲ್ಲಾ ದೇಶದಲ್ಲಿ ಭಯೋತ್ಪಾದನೆ ದಮನ ಮಾಡಿದ್ದೇವೆ. ಭಯೋತ್ಪಾದನೆ ನಿಯಂತ್ರಿಸಲಾಗದ ಸರ್ಕಾರ ವಜಾ ಮಾಡಿದ್ದೇವೆ.
ಮಂಗಳೂರು ಪೊಲೀಸ್ ಆಯುಕ್ತರ ಹೇಳಿಕೆ ಆಧರಿಸಿ ನಾನು ಪ್ರತಿಕ್ರಿಯಿಸಿದ್ದೇನೆ. ಪೊಲೀಸ್ ಆಯುಕ್ತರೇ ಆರೋಪಿಯನ್ನ ವಿಚಾರಣೆ ಮಾಡಿಲ್ಲ ಅಂತಾರೆ. ಹಾಗಿರುವಾಗ ಅವನಿಗೆ ಉಗ್ರ ಪಟ್ಟ ಹೇಗೆ ಕಟ್ಟುತ್ತಾರೆ. ಕುಕ್ಕರ್ ಬ್ಲಾಸ್ಟ್ ವಿಚಾರದಲ್ಲಿ ನನ್ನ ಬಗ್ಗೆ ಯಾರು ಬೇಕಾದ್ರೂ, ಏನಾದ್ರು ಪ್ರಚಾರ ಮಾಡ್ಲಿ. ನಮ್ಮದು ಕಾಂಗ್ರೆಸ್ ಪಕ್ಷ, ಭಯೋತ್ಪಾದನೆಯನ್ನು ವಿರೋಧಿಸುತ್ತಾ ಬಂದಿರುವ ಪಕ್ಷ. ಅಧಿಕಾರದಲ್ಲಿ ಇದ್ದಾಗೆಲ್ಲಾ ದೇಶದಲ್ಲಿ ಭಯೋತ್ಪಾದನೆ ದಮನ ಮಾಡಿದ್ದೇವೆ. ಭಯೋತ್ಪಾದನೆ ನಿಯಂತ್ರಿಸಲಾಗದ ಸರ್ಕಾರವನ್ನೇ ವಜಾ ಮಾಡಿದ್ದೇವೆ ಎಂದು ಡಿಕೆಶಿ ಹೇಳಿದ್ದಾರೆ.
ಮಂಗಳೂರು ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದೀವಿ. ಯುವಕನಿಗೆ ಪ್ರಜ್ಞೆ ಬರೋವರೆಗೆ ಏನೂ ಹೇಳಲು ಆಗಲ್ಲ ಅಂತ ಪೊಲೀಸ್ ಕಮೀಷನರ್ ಹೇಳಿದ್ರು. ಮಂಗಳೂರು ಪೊಲೀಸರು ಹಿನ್ನೆಲೆ ತಿಳ್ಕೊಬೇಕು ಅಂತ ಮೊದಲು ಹೇಳಿಕೆ ಕೊಟ್ರು. ಆದರೆ ಡಿಜಿಪಿ ಘಟನೆಗೆ ಭಯೋತ್ಪಾದನೆಯ ಲೇಪ ಕೊಟ್ರು. ಬಿಜೆಪಿಯ ಭ್ರಷ್ಟಾಚಾರ, ಮತಗಳ್ಳತನ, ಬೋಗಸ್ ವೋಟರ್ ಸೃಷ್ಟಿನ್ನು ಮುಚ್ಚುವ ಯತ್ನವಿದು ಎಂದು ಮತ್ತೆ ಡಿಕೆಶಿ ಆರೋಪಿಸಿದ್ದಾರೆ.