ಬಿಸಿಎಂ ಹಾಸ್ಟೆಲ್ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ | JANATA NEWS
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುರುಂಜಿಬಾಗ್ ಸಮೀಪ ಇರುವ ಬಾಲಕಿಯರ ಬಿಸಿಎಂ ಹಾಸ್ಟೆಲ್ ನ ರೂಂನಲ್ಲಿ ಬೆಂಗಳೂರು ಮೂಲದ ಸೋನಿಯಾ(17) ಎಂಬ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಇಲ್ಲಿನ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸೋನಿಯಾ (18) ಕುರುಂಜಿಭಾಗ್ ಸುಳ್ಯದ ಬಿಸಿಎಂ ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ
ಆಕೆಯ ಕೊಠಡಿಯಲ್ಲಿದ್ದ ಊಟದ ತಟ್ಟೆ ತರಲೆಂದು ಸಹಪಾಠಿ ಹೋದಾಗ ಬಾಗಿಲು ಹಾಕಿಕೊಂಡಿತ್ತು. ಬಾಗಿಲನ್ನು ಎಷ್ಟೆ ತಟ್ಟಿದರೂ ತೆರೆಯಲಿಲ್ಲ. ಊಟ ಮುಗಿಸಿ ಮತ್ತೆ ರೂಮಿಗೆ ಬಂದಾಗಲೂ ಬಾಗಿಲು ತೆರೆಯದೇ ಇದ್ದ ಕಾರಣ ಸಂಶಯಗೊಂಡು ವಿದ್ಯಾರ್ಥಿ ನಿಲಯದ ವಾರ್ಡನ್ಗೆ ಮಾಹಿತಿ ನೀಡಿದ್ದಾಳೆ.
ಕೂಡಲೇ ಸಿಬ್ಬಂದಿ ಬಂದು ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.