Fri,May03,2024
ಕನ್ನಡ / English

ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್, ಸ್ಫೋಟದ ಹಿಂದಿದೆ... | JANATA NEWS

29 Dec 2022
2743

ಹಾಸನ : ಹಾಸನ ನಗರದಲ್ಲಿ ಕೋರಿಯರ್‌ ಅಂಗಡಿಯೊಂದರಲ್ಲಿ ಡಿಸೆಂಬರ್ 26 ರಂದು ಮಿಕ್ಸಿ ಬ್ಲಾಸ್ಟ್‌ ಆಗಿತ್ತು. ಈ ಮಿಕ್ಸಿರ್​​​​​​​ ಬ್ಲಾಸ್ಟ್​​ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​ ಸಿಕ್ಕಿದೆ.

ಘಟನೆ ಸಂಬಂಧ ಪೊಲೀಸರು ಹಾಸನ ನಗರದ ಮಹಿಳೆಯನ್ನು ಕೊಲೆ ಮಾಡುವ ಉದ್ದೇಶದಿಂದ ಮಿಕ್ಸಿಯಲ್ಲಿ ಸ್ಫೋಟಕ ಅಳವಡಿಸಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹಾಸನ ನಿವಾಸಿಯಾಗಿದ್ದ ಮಹಿಳೆಯ ವಿಳಾಸಕ್ಕೆ ಪಾರ್ಸೆಲ್​ ಬಂದಿರುವುದು ಬೆಳಕಿಗೆ ಬಂದಿತ್ತು. ಕೊರಿಯರ್ ಮಾಲೀಕರು ಸಹ ಬಂದಿದ್ದ ಪಾರ್ಸೆಲ್​​ಅನ್ನು, ಮಹಿಳೆಯ ವಾಸಿಸುತ್ತಿದ್ದ ವಿಳಾಸಕ್ಕೆ ತಲುಪಿಸಿದ್ದರು.

ಆದರೆ ಪಾರ್ಸೆಲ್​​ ಮೇಲೆ ಯಾರು ಕಳುಹಿಸಿದ್ದಾರೆ ಎಂಬ ಮಾಹಿತಿ ಇಲ್ಲದ ಕಾರಣ ಮಹಿಳೆ ಪಾರ್ಸೆಲ್​​ಅನ್ನು ಮತ್ತೆ ​ಕೊರಿಯರ್​ ಸೆಂಟರ್​​ಗೆ ವಾಪಸ್ ನೀಡಿದ್ದರು. ಆ ವೇಳೆ ಕೊರಿಯರ್ ಸೆಂಟರ್ ಮಾಲೀಕರು, ಪಾರ್ಸೆಲ್​ ವಾಪಸ್ ಕಳುಹಿಸಲು 350 ಶುಲ್ಕ ರೂಪಾಯಿ ಶುಲ್ಕ ಆಗುತ್ತೆ ಅಂತ ಮಹಿಳೆಗೆ ತಿಳಿಸಿದ್ದರಂತೆ. ಆದರೆ ಪಾರ್ಸೆಲ್​ ಮೇಲೆ ಯಾವುದೇ ವಿಳಾಸ ಇಲ್ಲ, ಇದು ನನಗೆ ಬೇಡ ನೀವೇ ಏನಾದ್ರು ಮಾಡಿಕೊಳ್ಳಿ ಅಂತ ಹೇಳಿ ಆಕೆ ಅಲ್ಲಿಂದ ವಾಪಸ್ ಆಗಿದ್ದರಂತೆ. ಪಾರ್ಸೆಲ್​ ವಾಪಸ್ ಆಗಿದ್ದ ಕಾರಣ ಕೊರಿಯರ್ ಸೆಂಟರ್ ಮಾಲೀಕರು ಏನು ಮಾಡೋದು ಅಂತ ತಿಳಿಸಿಯದೇ, ಪಾರ್ಸೆಲ್ ನ್ನ ಟೇಬಲ್​ ಮೇಲಿಂದ ಕೆಳಗೆ ಇಡಲು ಮುಂದಾಗಿದ್ದ ವೇಳೆ ಮಿಕ್ಸಿ ಸ್ಫೋಟಗೊಂಡಿದೆ.

ಗಾಯಗೊಂಡಿದ್ದ ಕೋರಿಯರ್‌ ಮಳಿಗೆ ಮಾಲೀಕ ಶಶಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆತನ ಕೈಗೆ ದೊಡ್ಡ ತೀವ್ರ ಗಾಯವಾಗಿದ್ದು, ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತಿದ್ದಾರೆ.

ಘಟನೆ ಸಂಬಂಧ ಪೊಲೀಸರು ತನಿಖೆ ಪ್ರಾರಂಭಿಸಿದಾಗ ಭಯಾನಕ ಸ್ಫೋಟಕ ಸತ್ಯ ಬಯಲಾಗಿದೆ. ಅದೇನೆಂದರೆ..

ಈ ಮೊದಲೇ ವಿವಾಹ ಆಗಿದ್ದ ಮಹಿಳೆಯ ಪತಿಗೆ ಡಿವೋರ್ಸ್​ ನೀಡಿ ಮ್ಯಾಟ್ರಿಮೋನಿಯಲ್ಲಿ ತನ್ನ ಫೋಟೋವನ್ನ ಅಪ್‌ಲೋಡ್ ಮಾಡಿದ್ದಳು. ಈ ಫೋಟೋ ನೋಡಿದ ಆರೋಪಿ ಅನೂಪ್, ಮದುವೆ ಪ್ರಸ್ತಾಪ ಮಾಡಿದ್ದರು. ಇದಕ್ಕೆ ಮಹಿಳೆ ಸಮ್ಮತಿ ಸೂಚಿಸಿದ್ದಳು, ನಂತರ ಇಬ್ಬರೂ ಜೊತೆಯಲ್ಲೇ ಸುತ್ತಾಡಿದ್ದರು. ಆದರೆ ಕೆಲವು ದಿನಗಳಿಂದ ಇಬ್ಬರೂ ಬೇರೆಬೇರೆ ಆಗಿದ್ದರು ಎನ್ನಲಾಗಿದೆ.

ಮಹಿಳೆ, ಅನೂಪ್‌ ಕುಮಾರ್‌ ನಿಂದ ಲಕ್ಷಾಂತರ ರೂಪಾಯಿ ಹಣ ಸಾಲ ಪಡೆದುಕೊಂಡಿದ್ದರಂತೆ. ಆದರೆ ಹಣ ಪಡೆದುಕೊಂಡ ನಂತರ ಮಹಿಳೆ ತನ್ನ ವರಸೆ ಬದಲಿಸಿ, ಕೊಟ್ಟ ಹಣವನ್ನು ವಾಪಸ್ ಕೊಡದೆ, ಇತ್ತ ಮದುವೆಯೂ ಆಗದೆ ಆರೋಪಿಯಿಂದ ಅಂತರ ಕಾಯ್ದುಕೊಂಡಿದ್ದರು ಎಂಬ ಆರೋಪ ಕೇಳಿ ಬಂದಿದೆ.

ಇದರಿಂದ ಕೆರಳಿದ್ದ ಪ್ರಿಯಕರ ಅನೂಪ್.. ಮಿಕ್ಸಿಯಲ್ಲಿ ಸ್ಫೋಟಕ ಇಟ್ಟು ಪಾರ್ಸಲ್ ಕಳುಹಿಸಿ ಮಹಿಳೆ ಹತ್ಯೆಗೆ ಸಂಚು ರೂಪಿಸಿದ್ದ ಎನ್ನಲಾಗಿದೆ.

RELATED TOPICS:
English summary :Big twist in Mixi blast case, behind the blast...

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...