ಕಾರು, ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ಯುವಕ ಸಾವು | JANATA NEWS
ಹಾಸನ : ನ್ಯೂ ಇಯರ್ ಪಾರ್ಟಿ ಮುಗಿಸಿ ವಾಪಸ್ ಆಗುತ್ತಿದ್ದಾಗ ಕೆಎಸ್ಆರ್ಟಿಸಿ ಬಸ್, ಕಾರಿಗೆ ಡಿಕ್ಕಿ ಹೊಡೆದಿದ್ದು ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಕಲೇಶಪುರ ತಾಲೂಕಿನ ಹಾರ್ಲೆ ಕೂಡಿಗೆ ಬಳಿ ನಡೆದಿದೆ.
ಹಾಸನದ ಕಾಕನಮನೆ ಗ್ರಾಮದ ಅಭಿ ಮೃತ ಯುವಕ. ಯುವಕ ಅಭಿ ಹೊಸವರ್ಷ ಪಾರ್ಟಿ ಮುಗಿಸಿ ವಾಪಸ್ಸು ಹಾನುಬಾಳು ಕಡೆಯಿಂದ ಊರಿಗೆ ತೆರಳುತ್ತಿದ್ದ. ಇದೇ ವೇಳೆ ಸಕಲೇಶಪುರದಿಂದ ಹಾನುಬಾಳು ಕಡೆಗೆ ಸಾರಿಗೆ ಬಸ್ ಕೂಡ ಹೊರಟಿತ್ತು. ಈ ವೇಳೆ ಕೆಎಸ್ಆರ್ಟಿಸಿ ಬಸ್ ಮುಂದೆಯಿಂದ ಬಂದು ಕಾರಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಕಾರಿನಲ್ಲಿದ್ದ ಅಭಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಕಲೇಶಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
RELATED TOPICS:
English summary :A terrible accident between a car and a KSRTC bus, a young man died on the spot