ಉದ್ಯಮಿ ಪ್ರದೀಪ್ ಆತ್ಮಹತ್ಯೆ, ಅರವಿಂದ ಲಿಂಬಾವಳಿಯನ್ನು ಬಂಧಿಸಿ ವಿಚಾರಣೆ ನಡೆಸಬೇಕು: ಸಿದ್ದರಾಮಯ್ಯ | JANATA NEWS
ಬೆಂಗಳೂರು : ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಆರೋಪಿಗಳ ಬಂಧನವಾಗಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.
ಬಿಜೆಪಿ ಕಾರ್ಯಕರ್ತ ಹಾಗೂ ಉದ್ಯಮಿ ಪ್ರದೀಪ್ ನಿವಾಸಕ್ಕೆ ಸುರ್ಜೆವಾಲ ಹಾಗೂ ಸಿದ್ದರಾಮಯ್ಯ ಭೇಟಿ ನೀಡಿದ್ದು ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.
ಸಿದ್ದರಾಮಯ್ಯ ಮಾತನಾಡಿ ಇದು ನಡೆಯಬಾರದ ಘಟನೆ. ಹಣಕಾಸಿನ ವ್ಯವಹಾರದಲ್ಲಿ ಇಂತಹ ಘಟನೆ ಆಗಿದೆ. ಪ್ರದೀಪ್ ಪತ್ನಿಯವರು ಪ್ರದೀಪ್ಗೆ ನ್ಯಾಯ ಕೊಡಿಸಿ ಅಂತ ಕೇಳಿದ್ದಾರೆ. 1.5 ಕೋಟಿ ನಾವು ಇನ್ವೆಸ್ಟ್ ಮಾಡಿದ್ದೆವು. ಒಂದೇ ಒಂದು ಪೈಸೆ ಲಾಭ ಬಂದಿಲ್ಲ. ನಮ್ಮ ಹಣ ವಾಪಸ್ ಕೊಡಿ ಅನ್ನೋದು ಇವರ ವಾದ.
ಲಿಂಬಾವಳಿ ಈ ಭಾಗದ ಶಾಸಕರು. ಸೆಟ್ಲಮೆಂಟ್ಗೆ ಪ್ರಯತ್ನ ಮಾಡಿದ್ದಾರೆ. ಡೆತ್ನೋಟ್ ನಲ್ಲಿ 6 ಜನರ ಹೆಸರು ಇದ್ದು ಅದರಲ್ಲಿ ಲಿಂಬಾವಳಿ ಹೆಸರು ಕೂಡ ಇದೆ. ಈಗಾಗಲೇ FIR ಆಗಿದೆ. ಪೊಲೀಸರು ಹಣವನ್ನು ವಾಪಸ್ ಕೊಡಿಸಬೇಕು. ಕೂಡಲೇ ಎಲ್ಲರನ್ನು ಅರೆಸ್ಟ್ ಮಾಡಬೇಕು.
ತಾವು ನಂಬಿದ್ದ ಸ್ನೇಹಿತರಿಂದ ಹಣಕಾಸಿನ ವಿಚಾರದಲ್ಲಿ ಮೋಸಹೋಗಿ ಹಣಕಳೆದುಕೊಂಡು ಹತಾಷರಾಗಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಪ್ರದೀಪ್ ಅವರು ತಮ್ಮ ಡೆತ್ ನೋಟ್ ನಲ್ಲಿ ಮಾಜಿ ಶಾಸಕ ಮತ್ತು ಮಹದೇವಪುರ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರ ಹೆಸರನ್ನು ಕೂಡ ಪ್ರಸ್ತಾಪಿಸಿರುವುದರಿಂದ ಅವರನ್ನು ಕೂಡಲೇ ಬಂಧಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಈ ಸರ್ಕಾರದಲ್ಲಿ ಅನೇಕ ಜನ ಸಾಯೋದು, ದಯಾ ಮರಣ ಕೋರೋದು ಆಗ್ತಿದೆ. ಇದಕ್ಕೆ ಭ್ರಷ್ಟಾಚಾರ ಕಾರಣ. ಭ್ರಷ್ಟಾಚಾರದ ವಿರುದ್ದ ಕ್ರಮ ಆಗದೆ ಇರೋದಕ್ಕೆ ಹೀಗೆ ಅಗ್ತಿದೆ. ಈ ಕೇಸ್ ನಲ್ಲಿ ಪ್ರದೀಪ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದರು.
ಪೊಲೀಸರು ಅವರ ಮನೆಯವರ ಮೊಬೈಲ್ ಕೇಳ್ತಿದ್ದಾರೆ ಅಂತೆ. ಹೀಗೆಲ್ಲ ಮಾಡೋದು ಸರಿಯಲ್ಲ. ಗುತ್ತಿಗೆದಾರ ಸಂತೋಷ್ ಪಾಟೀಲ್ ನನ್ನ ಸಾವಿಗೆ ಈಶ್ವರಪ್ಪ ಕಾರಣ ಅಂತ ಹೇಳಿದ್ರು.3 ತಿಂಗಳಲ್ಲಿ ಬಿ ರಿಪೋರ್ಟ್ ಕೊಟ್ರು. ಇದೇ ಪರಿಸ್ಥಿತಿ ಈ ಕೇಸ್ನಲ್ಲಿ ಆಗಬಾರದು. ಸರ್ಕಾರ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕು.