Sun,May19,2024
ಕನ್ನಡ / English

ಪತಿಯ ಜತೆ ಸೇರಿ‌ ಪ್ರಿಯಕರನ ಹತ್ಯೆ, ಶವದೊಂದಿಗೆ ಬೈಕ್​​ನಲ್ಲಿ ಥ್ರಿಬಲ್​ ರೈಡ್ | JANATA NEWS

08 Jan 2023
2133

ಬೆಂಗಳೂರು : ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡನನ್ನು ಮುಗಿಸಲು ಮಹಿಳೆ ಪ್ಲ್ಯಾನ್ ಮಾಡಿದ್ದಳು, ಆದರೆ ಪ್ರಿಯಕರನೇ ಕೊಲೆಯಾದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಉತ್ತರ ಪ್ರದೇಶ ಮೂಲದ ರೀನಾ ಹಾಗೂ ಗಂಗೇಶ್ ದಂಪತಿ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ವಾಸವಿದ್ದರು. ಗಂಗೇಶ್ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದರೆ, ರೀನಾ ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡುತ್ತಿದ್ದಳು. ಈ ನಡುವೆ ಕೊರಿಯರ್ ಡಿಲವರಿ ಮಾಡುತ್ತಿದ್ದ ಅಸ್ಸಾಂ ಮೂಲದ ನಿಬಾಶಿಸ್ ಪಾಲ್ ಮತ್ತು ರೀನಾ ಪರಿಚಯವಾಗಿ ಬಳಿಕ ದೈಹಿಕ ಸಂಬಂಧಕ್ಕೆ ತಿರುಗಿತ್ತು.

ಇಬ್ಬರು ಒಂದಾಗಲು ಗಂಡನನ್ನೇ ಕೊಲೆ ಮಾಡಲು ರೀನಾ ಸ್ಕೆಚ್​ ಸಿದ್ದಪಡಿಸಿದ್ದಳಂತೆ. ಆದರೆ ಈ ವಿಚಾರ ತಿಳಿದ ಪತಿ ಗಂಗೇಶ್, ತನ್ನ ಪತ್ನಿಯನ್ನು ನಗರದಲ್ಲೇ ಬಿಟ್ಟು ಉತ್ತರ ಪ್ರದೇಶ ಸ್ವಗ್ರಾಮಕ್ಕೆ ತೆರಳಿದ್ದ. ಇಷ್ಟೇ ಸಾಕು ಅಂದುಕೊಂಡಿದ್ದ ರೀನಾ, ಪ್ರಿಯಕರನೊಂದಿಗೆ ಸುತ್ತಾಡಿಕೊಂಡಿದ್ದಳು.

ಆದರೆ ಕೆಲ ದಿನಗಳ ಬಳಿಕ ತನ್ನ ನೈಜ ಮುಖ ತೋರಿಸಿದ್ದ ಪ್ರಿಯಕರ, ರೀನಾಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಲು ಶುರು ಮಾಡಿದ್ದನಂತೆ. ಅಲ್ಲದೇ ಬೇರೆ ಪುರುಷರೊಂದಿಗೆ ಮಲಗಿಕೊಳ್ಳವಂತೆ ಒತ್ತಾಯ ಮಾಡುತ್ತಿದ್ದನಂತೆ.

ಪ್ರಿಯಕರನ ಹಿಂಸೆ ತಾಳಲಾಗದೆ, ಮತ್ತೆ ಗಂಡನ ಪಾದವೇ ಮೇಲು ಎಂದುಕೊಂಡಿದ್ದ ರೀನಾ, ಗಂಗೇಶ್​ಗೆ ಕರೆ ಮಾಡಿ ತನಗೆ ಆಗುತ್ತಿದ್ದ ಹಿಂಸೆಗಳನ್ನು ಹೇಳಿಕೊಂಡಿದ್ದಳಂತೆ. ಅಲ್ಲದೇ ಇದೊಂದು ಬಾರಿ ನನ್ನದು ತಪ್ಪಾಗಿದೆ, ದಯವಿಟ್ಟು ಕ್ಷಮಿಸಿ ಬಿಡಿ ಅಂತ ಕೇಳಿಕೊಂಡಿದ್ದಾಳೆ.

ಡಿ. 3ರಂದು ಆರೋಪಿಗಳು ನಿಭಾಶಿಸ್​​ನ ಕತ್ತು ಬಿಗಿದು ಕೊಲೆಗೈದಿದ್ದರು. ಸುಮಾರು 3 ರಿಂದ 4 ಗಂಟೆ ಕಾಲ ಬೈಕ್​ ಮೇಲೆ ಮೃತದೇಹವನ್ನು ಇಟ್ಟುಕೊಂಡು ಸೂಕ್ತ ಸ್ಥಳಕ್ಕಾಗಿ ಹುಡುಕಾಟ ನಡೆಸಿದ್ದರು. ಆದರೆ ಯಾವುದೇ ಸ್ಥಳ ಸಿಗದ ಕಾರಣ ತಮಿಳುನಾಡಿನ ಹೊಸೂರು ಮಾರ್ಗಕ್ಕೆ ತೆರಳಿ ನಿರ್ಜನ ಪ್ರದೇಶವೊಂದರಲ್ಲಿ ಮೃತದೇಹ ಎಸೆದು ಬಂದಿದ್ದರು.ಆರೋಪಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ತನಿಖೆ ಕೈಗೊಂಡಾಗ ಆರೋಪಿಗಳ ಕೃತ್ಯ ಬಯಲಾಗಿದೆ.

RELATED TOPICS:
English summary :Murder of lover along with husband, triple ride on bike with dead body

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...