ಮೆಟ್ರೋ ಪಿಲ್ಲರ್ ಕುಸಿತ, BMRCL ಇಂದ 20 ಲಕ್ಷ ಪರಿಹಾರ ಘೋಷಣೆ | JANATA NEWS
ಬೆಂಗಳೂರು : ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕಬ್ಬಿಣದ ರಾಡ್ ಬಿದ್ದ ಪರಿಣಾಮ ತಾಯಿ ಹಾಗೂ ಮಗು ಸಾವನ್ನಪ್ಪಿರೋ ಘಟನೆ ನಾಗವಾರ ಬಳಿಯ HBR ಲೇಔಟ್ನಲ್ಲಿ ನಡೆದಿದೆ.
ತೇಜಸ್ವಿನಿ (35) ಹಾಗೂ ಎರಡೂವರೆ ವರ್ಷದ ವಿಹಾನ್ ಮೃತ ದುರ್ದೈವಿಗಳು. ಮೃತಪಟ್ಟ ತೇಜಸ್ವಿನಿ ಕುಟುಂಬಕ್ಕೆ 20 ಲಕ್ಷ ಪರಿಹಾರ ನೀಡುವುದಾಗಿ ಬಿಎಂಆರ್ಸಿಎಲ್ (BMRCL) ಎಂಡಿ ಅಜ್ಜುಂ ಪರ್ವೇಜ್ ಘೋಷಿಸಿದರು.
ಮೃತರು ಇಬ್ಬರು ಹೊರಮಾವು ಡಿಎಕ್ಸ್ ಮ್ಯಾಕ್ಸ್ ಅಪಾರ್ಟ್ಮೆಂಟ್ ನಿವಾಸಿಗಳು. ಗದಗ ಮೂಲದ ಸಿವಿಲ್ ಎಂಜಿನಿಯರ್ ಲೋಹಿತ್, ಪತ್ನಿ ಮತ್ತು ಇಬ್ಬರು ಅವಳಿ ಮಕ್ಕಳ ಸಮೇತ ಮನೆಯಿಂದ ಹೊರಟಿದ್ದರು. ಪತ್ನಿಯನ್ನು ಕೆಲಸಕ್ಕೆ, ಇಬ್ಬರು ಮಕ್ಕಳನ್ನು ಡೇ ಕೇರ್ನಲ್ಲಿ ಬಿಡಲು ಮಾನ್ಯತಾ ಟೆಕ್ಪಾರ್ಕ್ ಕಡೆ ಲೋಹಿತ್ ತೆರಳುತ್ತಿದ್ದಾಗ ಹೆಣ್ಣೂರು ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಎಂದು ಕುಸಿದಿದೆ.
ಗಂಭೀರ ಗಾಯಗೊಂಡಿದ್ದ ತಾಯಿ ಮಗುವನ್ನು ಕೂಡಲೇ ಅಲ್ಟಿಯಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ತಾಯಿ, ಹಾಗೂ ಮಗು ಸಾವನ್ನಪ್ಪಿದ್ದಾರೆ.
ಎಂಜಿನಿಯರ್ ಜೊತೆಗೆ ಮಾತಾಡುತ್ತೇನೆ. ಇಂಡಿಯನ್ ಇನ್ಸ್ಟಿಟ್ಯೂಟ್ ಸೈನ್ಸ್ಗೆ ಮನವಿ ಮಾಡುತ್ತೇವೆ. ಅವರು ಬಂದು ಪರಿಶೀಲನೆ ನಡೆಸುತ್ತಾರೆ. ಜೊತೆಗೆ ಚೀಫ್ ಎಂಜಿನಿಯರ್, ಕಂಟ್ರ್ಯಾಕ್ಟರ್ ನೋಟಿಸ್ ಕೊಡುತ್ತೇವೆ. ಇದು ಕಳಪೆ ಕಾಮಗಾರಿಯಿಂದ ಆದ ದುರಂತವಲ್ಲ. ಸದ್ಯಕ್ಕೆ ಎರಡು ದಿನ ಕೆಲಸ ಸಂಪೂರ್ಣ ನಿಲ್ಲಿಸುತ್ತೇವೆ. ವರದಿ ಬಂದ ನಂತರ ಸಂಬಂಧಪಟ್ಟವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಮ್ಯಾನ್ಯುಯಲ್ ಆಗಿ ಮಿಸ್ಟೆಕ್ ಆಗಿರುವುದಾ ಅಥವಾ ಟೆಕ್ನಿಕಲ್ ತೊಂದರೆಯೇ ಎನ್ನುವುದನ್ನು ನೋಡಬೇಕು ಎಂದು ಬಿಎಂಆರ್ಸಿಎಲ್ (BMRCL) ಎಂಡಿ ಅಜ್ಜುಂ ಪರ್ವೇಜ್ ಹೇಳಿದರು.