ಹೆಣ್ಣು ಮಗು ಹುಟ್ಟಿದಕ್ಕೆ ಗಂಡನ ಕಿರುಕುಳ, ಮನನೊಂದು ಮಕ್ಕಳೊಂದಿಗೆ ಕಾಲುವೆ ಜಿಗಿದ ತಾಯಿ | JANATA NEWS
ಬಳ್ಳಾರಿ : ಹೆಣ್ಣುಮಕ್ಕಳೇ ಹೆತ್ತಿದ್ದೀಯಾ ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ಇದರಿಂದ ಬೇಸತ್ತು ನಾಲ್ವರು ಹೆಣ್ಣುಮಕ್ಕಳ ತಾಯಿಯೊಬ್ಬಳು ತನ್ನಿಬ್ಬರು ಮಕ್ಕಳೊಂದಿಗೆ ಕಾಲುವೆ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.
ಲಕ್ಷ್ಮೀ ಬಳ್ಳಾರಿ ತಾಲೂಕಿನ ಗುಗ್ಗರಟ್ಟಿ ಗ್ರಾಮದ ನಿವಾಸಿಯಾಗಿದ್ದು, ಇಬ್ಬರು ಮಕ್ಕಳೊಂದಿಗೆ ಹಾರಿದ್ದಾರೆ. ಈ ವೇಳೆ ಕುರಿ ಕಾಯುತ್ತಿದ್ದ ಆನಂದ್ ಹಾಗೂ ಮತ್ತಿತರರು ನಾಲ್ಕು ವರ್ಷದ ಮಗಳು ವೆನಿಲಾಳನ್ನು ರಕ್ಷಣೆ ಮಾಡಿದ್ದಾರೆ
16ವರ್ಷದ ಹಿಂದೆ ಗುಗ್ಗರಟ್ಟಿ ನಿವಾಸಿ ವೀರಭದ್ರ ಜೊತೆಯಲ್ಲಿ ಮದುವೆಯಾಗಿದ್ದ ಲಕ್ಷ್ಮೀ ಮದುವೆ ಬಳಿಕ ನಾಲ್ಕು ಜನ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಳು. ನಾಲ್ಕು ಹೆಣ್ಣೇ ಹುಟ್ಟಿವೆ ಎಂಬ ಕಾರಣಕ್ಕೆ ಮನೆಯಲ್ಲಿ ನಿತ್ಯ ಜಗಳ ಮಾಡುತ್ತಿದ್ದ ಪತಿ ವೀರಭದ್ರನ ಕಾಟಕ್ಕೆ ಬೇಸತ್ತು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗ್ತಿದೆ.
ಬಳ್ಳಾರಿಯ ಮೋಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.