ನಾ ನಾಯಕಿ ಅಲ್ಲ, ನಾ ನಾಲಾಯಕಿ ಕಾರ್ಯಕ್ರಮ: ಅಶ್ವತ್ಥ ನಾರಾಯಣ ವ್ಯಂಗ್ಯ | JANATA NEWS
ಬೆಂಗಳೂರು : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬೆಂಗಳೂರಿನಲ್ಲಿ ನಡೆಸುತ್ತಿರುವ ಕಾರ್ಯಕ್ರಮ ನಾ ನಾಯಕಿ ಅಲ್ಲ, ನಾ ನಾಲಾಯಕಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ್ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದ ಚುನಾವಣೆ ವೇಳೆ ಪ್ರಿಯಾಂಕಾ ಗಾಂಧಿ ರಾಜ್ಯ ಪ್ರವಾಸ ನಡೆಸಿ ಅವಿರತವಾಗಿ ಪ್ರಯತ್ನ ಮಾಡಿದರೂ ಏನು ಪ್ರತಿಫಲ ತಂದುಕೊಂಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಅಲ್ಲಿ ಅವರು ಸಿಂಗಲ್ ಡಿಜಿಟ್ ಗೂ ಬರಲಿಲ್ಲ. ಅವರು ಇಲ್ಲಿ ಬಂದು ಏನು ಮಾಡುತ್ತಾರೆ. ಅವರು ಕೂಡ ಇಲ್ಲಿರುವ ನಮ್ಮ ಸ್ನೇಹಿತರ ಜೊತೆ ಸೇರಿಕೊಳ್ಳಲಿದ್ದಾರೆ ಅಷ್ಟೆ. ಇಡೀ ದೇಶದಲ್ಲಿ ಎಲ್ಲಾ ಕಡೆ ಕಾಂಗ್ರೆಸ್ ಸೋಲುತ್ತಿದೆ.
ಸಂಪೂರ್ಣವಾಗಿ ಕಾಂಗ್ರೆಸ್ ಅಪ್ರಸ್ತುತ ಪಕ್ಷವಾಗಿದೆ. ಜನ ಯಾವ ರೀತಿಯಿಂದಲೂ ಅವರನ್ನು ಎದುರು ನೋಡುತ್ತಿಲ್ಲ, ಅವರಿಗೆ ಸ್ಪಷ್ಟತೆ ಇಲ್ಲ. ದೇಶ ಮೊದಲು, ದೇಶದ ಶ್ರೇಯೋಭಿವೃದ್ಧಿ ಮೊದಲು ಎನ್ನುವುದು ಅವರಿಗೆ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.