ಟೋಲ್ಗೇಟ್ ಅಪಘಾತ: 1 ಕಿ.ಮೀ ದೂರ ವ್ಯಕ್ತಿಯನ್ನು ಎಳೆದೊಯ್ದ ಬೈಕ್ ಸವಾರ | JANATA NEWS
ಬೆಂಗಳೂರು : ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಟಾಟಾ ಸುಮೋ ಕಾರಿಗೆ ಡಿಕ್ಕಿ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ.
ಸಾಹಿಲ್ ಎಂಬ ಯುವಕ ಈ ಕೃತ್ಯ ಎಸಗಿದ್ದಾನೆ. ಮುತ್ತಪ್ಪ ಗಾಯಗೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಕಾರಿನ ಡ್ರೈವರ್ ಪ್ರಶ್ನಿಸುತ್ತಿದ್ದಂತೆ ಸವಾರ ಸ್ಕೂಟರ್ ಹತ್ತಿ ಎಸ್ಕೇಪ್ ಆಗಲು ಮುಂದಾಗಿದ್ದಾನೆ.ಅಪಘಾತದ ನಂತರ ಗುದ್ದಿದ ಬೈಕ್ ಸವಾರ ತಪ್ಪಿಸಿಕೊಳ್ಳಲು ನೋಡಿದ್ದಾನೆ. ಆಗ ಆತನನ್ನು ಹಿಡಿಯಲು ಪ್ರಯತ್ನಿಸಿದ ಕಾರಿನ ಚಾಲಕನನ್ನು ಬೈಕ್ನಲ್ಲಿ ಸುಮಾರು ಒಂದು ಕಿಲೋಮೀಟರ್ ವರೆಗೂ ಎಳೆದು ಕೊಂಡು ಹೋಗಿದ್ದಾನೆ.
ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್ ಸವಾರ ಕಾರಿಗೆ ಗುದ್ದಿದ್ದಾನೆ. ಕಾರಿನ ಚಾಲಕ ಬೈಕ್ ಸವಾರನನ್ನು ಪ್ರಶ್ನಿಸಿದ್ದಾನೆ. ಈ ವೇಳೆ, ಬೈಕ್ ಸವಾರ ತಪ್ಪಿಸಿಕೊಂಡು ಓಡಲು ಪ್ರಯತ್ನಿಸಿದ್ದಾನೆ. ಆಗ ಕಾರಿನ ಡ್ರೈವರ್ ಬೈಕ್ನ ಹಿಂದಿನ ಹಿಡಿಕೆ ಹಿಡಿದು ತಡೆಯಲು ಪ್ರಯತ್ನಿಸಿದಾಗ ಆತನನ್ನು ಮಾಗಡಿ ರಸ್ತೆ ಟೋಲ್ ಗೇಟ್ ಬಳಿಯಿಂದ ಹೊಸಳ್ಳಿ ಮೆಟ್ರೋ ನಿಲ್ದಾಣದ ವರೆಗೆ ದರ ದರನೆ ಎಳೆದೊಯ್ದಿದ್ದಾನೆ.
ವಯಸ್ಸಾದ ಚಾಲಕನನ್ನು ಸ್ಕೂಟರ್ನಲ್ಲಿ ಎಳೆದೊಯ್ಯುತ್ತಿರುವ ದೃಶ್ಯವನ್ನು ಸ್ಥಳದಲ್ಲಿದ್ದ ಸಾರ್ವಜನಿಕರು ವಿಡಿಯೋ ಮಾಡಿದ್ದಾರೆ. ರಾಂಗ್ ಸೈಡ್ನಲ್ಲಿ ಬಂದ ಸ್ಕೂಟರ್ ಚಾಲಕ ಟಾಟಾ ಸುಮೋ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.
ಸಾರ್ವಜನಿಕರಿಂದ ಧರ್ಮದೇಟು ತಿಂದ ಬೈಕ್ ಸವಾರ ಹಾಗೂ ಬೈಕಿನ ಹಿಂದೆ ನೇತುಬಿದ್ದು ಒಂದು ಕಿಲೋಮೀಟರ್ ಎಳೆದೊಯ್ಯಲ್ಪಟ್ಟ ಕಾರಿನ ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಆರೋಪಿ ಸಾಹಿಲ್ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.