ತಾಲೂಕು ಕಚೇರಿಯಲ್ಲೇ ವ್ಯಕ್ತಿಯನ್ನು ಕೊಚ್ಚಿ ಹತ್ಯೆಗೆ ಯತ್ನ | JANATA NEWS
ಮಂಡ್ಯ : ತಾಲೂಕು ಕಚೇರಿಯಲ್ಲೇ ಕುಡುಗೋಲಿನಿಂದ ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿದ ಭೀಕರ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ
. ಮರಳಿಗ ಗ್ರಾಮದ ಚನ್ನರಾಜು (45) ಎಂಬುವವರ ಮೇಲೆ ಅದೇ ಗ್ರಾಮದ ನಂದನ್ ಎಂಬುವವರು ಕುಡುಗೋಲಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ.
ಮದ್ದೂರು ತಾಲೂಕು ಕಚೇರಿಯ ಮೊದಲ ಮಹಡಿಯಲ್ಲಿ ಜಗಳ ತೆಗೆದ ನಂದನ್ ಚನ್ನರಾಜು ಮೇಲೆ ಕುಡುಗೋಲಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಸದ್ಯ ಹಲ್ಲೆಗೊಳಗಾದ ಚನ್ನರಾಜುನನ್ನು ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಮೀನು ವ್ಯಾಜ್ಯ ಹಿನ್ನೆಲೆ ಇಬ್ಬರು ತಾಲೂಕು ಕಚೇರಿಗೆ ಬಂದಿದ್ದರು. ಚಿನ್ನರಾಜ್ ಪರ ತೀರ್ಪು ನೀಡುತ್ತಿದ್ದಂತೆ ಈ ವಿಚಾರಕ್ಕೆ ಪರಸ್ಪರ ಜಗಳ ನಡೆದಿದೆ. ಅಲ್ಲಿದ್ದವರೂ ಬಿಡಿಸಲು ಪ್ರಯತ್ನಿಸಿದರೂ ಆಗಲಿಲ್ಲ, ಕೊನೆಗೆ ಅಲ್ಲಿದ್ದ ಸ್ಥಳೀಯರು ನಂದನ್ ಮೇಲೆ ಕಲ್ಲು ತೂರಿ ಮಾರಣಾಂತಿಕ ಹಲ್ಲೆಯನ್ನು ತಡೆದಿದ್ದಾರೆ ಎನ್ನಲಾಗಿದೆ
ಮದ್ದೂರು ತಾಲೂಕು ಕಚೇರಿ ಬಳಿ ಕಾದು ಮಚ್ಚೆನಿಂದ ಹಲ್ಲೆ ಮಾಡಿದ್ದು, ಈ ಹಲ್ಲೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಇನ್ನು ಘಟನೆ ಮದ್ದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.