ಕೊರೊನಾ ಸಂದರ್ಭದಲ್ಲಿ ಮೂರು ಸಾವಿರ ಕೋಟಿ ಭ್ರಷ್ಟಾಚಾರ, ಅದರ ಮಾಸ್ಟರ್ ಡಾ. ಕೆ ಸುಧಾಕರ್! | JANATA NEWS
ಬೆಂಗಳೂರು : ಆಲಿಬಾಬಾ ಮತ್ತು ಈ 40 ಕಳ್ಳರು ಇದ್ದಾರಲ್ಲ? ಹಾಗೇ ಈ ಬಿಜೆಪಿಯವರು. ಅದರಲ್ಲಿ ಈ ಸುಧಾಕರ್ ಕೂಡ ಒಬ್ಬ. ಕೊರೊನಾ ಸಂದರ್ಭದಲ್ಲಿ ಮೂರು ಸಾವಿರ ಕೋಟಿ ಭ್ರಷ್ಟಾಚಾರ ಮಾಡಿದ್ದಾರೆ. ಅದರ ಮಾಸ್ಟರ್ ಡಾ. ಕೆ ಸುಧಾಕರ್ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯಅವರ ವಿರುದ್ಧ ಮಾಡಿರುವ 35 ಸಾವಿರ ಕೋಟಿ ಭ್ರಷ್ಟಾಚಾರದ ಆರೋಪಕ್ಕೆ ದಾಖಲೆಗಳ ಸಮೇತ ಪತ್ರಿಕಾಗೋಷ್ಠಿ ನಡೆಸಿ, ಸಚಿವ ಸುಧಾಕರ್ ಆರೋಪಕ್ಕೂ- ಸಿಎಜಿ ವರದಿಯಲ್ಲಿ ಇರುವುದಕ್ಕೂ ಒಂದಕ್ಕೊಂದು ಸಂಬಧವೇ ಇಲ್ಲ.
ಸಚಿವ ಸುಧಾಕರ್ ಒಬ್ಬ ಪೆದ್ದ. ಸಿಎಜಿ ರಿಪೋರ್ಟ್ ಓದೋಕೆ, ಅರ್ಥ ಮಾಡಿಕೊಳ್ಳೋಕೆ ಬರೋದಿಲ್ಲ. ರೀಕನ್ಸಿಲಿಯೇಷನ್ ರಿಪೋರ್ಟ್ ಅಂತ ಎಜಿ ರಿಪೋರ್ಟ್ ಅನ್ನು ಕರಿತಾರೆ. ಅನುದಾನ ಖರ್ಚು ತಾಳೆ ಆಗುತ್ತಿದೆಯಾ ಇಲ್ಲವಾ ಎಂದು ನೋಡೋದು ಎಜಿ ರಿಪೋರ್ಟ್. ರೀಕನ್ಸಿಲಿಯೇಷನ್ ರಿಪೋರ್ಟ್ ನಲ್ಲಿ ಎಲ್ಲಾ ಕಾಲದಲ್ಲೂ ಕೂಡ ಕೆಲವು ಪರ್ಸೆಂಟೇಜ್ ತಾಳೆ ಆಗೋದಿಲ್ಲ. ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಶೇ.50 ರಷ್ಟು ರೀಕನ್ಸಿಲಿಯೇಷನ್ ಆಗುತ್ತಿರಲಿಲ್ಲ. ಆದರೆ ನಾವು ತೆಗೆದುಕೊಂಡ ಕ್ರಮಗಳಿಂದ ಈ ಪ್ರಮಾಣ ಶೇ. 16, 18 ರಷ್ಟು ಮಾತ್ರ ಬಾಕಿ ಉಳಿಯುತ್ತಿತ್ತು. ಮೆಚ್ಚುಗೆ ಸೂಚಿಸಬೇಕಾದ್ದಕ್ಕೆ ಭ್ರಷ್ಟಾಚಾರ ಅಂತ ಕರೆದಿದೆ ಈ ಪೆದ್ದು ಎಂದಿದ್ದಾರೆ. ಭಷ್ಟಾಚಾರ ಎಂದರೆ ಯಾವುದು ಗೊತ್ತಾ ಸುಧಾಕರ್? ಕೊರೋನಾ ಸಮಯದಲ್ಲಿ ಹೆಣಗಳ ವಿಚಾರದಲ್ಲೂ ಲಂಚ ಹೊಡೆಯುವುದು ಭ್ರಷ್ಟಾಚಾರ ಎಂದು ಕಿಡಿ ಕಾರಿದ್ದಾರೆ.