ಧಾರವಾಡದ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ | JANATA NEWS
ಧಾರವಾಡ : ಸಂಸತ್ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-2024ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ.
ಕೆಂಪು ಬಣ್ಣದ ಸೀರೆಯುಟ್ಟ ವಿತ್ತ ಸಚಿವೆ ವಿಶೇಷ ಅಂದ್ರೆ ಬಜೆಟ್ ಮಂಡನೆಯ ದಿನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಉಡುವ ಸೀರೆ ಕೂಡ ವಿಶೇಷವಾಗಿರುತ್ತದೆ. ಧಾರವಾಡ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು ಬಣ್ಣದ ಸೀರೆಯುಟ್ಟಿರುವುದು ವಿಶೇಷ.
ನಿರ್ಮಲಾ ಸೀತಾರಾಮನ್ ಸಂಸತ್ತಿಗೆ ಧರಿಸಿ ಬಂದಿದ್ದ ಆಕರ್ಷಣೀಯವಾಗಿದ್ದ ಸೀರೆಗೆ ಕಸೂತಿ ಹಾಕಿ ವಿಶೇಷವಾಗಿ ರೂಪಿಸಿದ್ದು ಕರ್ನಾಟಕದ ಧಾರವಾಡ ನಗರದ ನಾರಾಯಣಪುರದಲ್ಲಿ ಇರುವ ಆರತಿ ಹಿರೇಮಠ ಮಾಲೀಕತ್ವದ ಆರತಿ ಕ್ರಾಪ್ಟ್ಸ್ ನ ಮಹಿಳಾ ಸಿಬ್ಬಂದಿ ಎನ್ನುವುದು ಇನ್ನೂ ವಿಶೇಷವಾಗಿದೆ. ಪ್ರೀತಿ ಮತ್ತು ಶಕ್ತಿಯ ದ್ಯೋತಕವಾಗಿರುವ ಈ ಬಣ್ಣವು ಕೈಮಗ್ಗ ಸೀರೆಗಳನ್ನು ಉತ್ತೇಜಿಸುತ್ತಿದೆ.
ಜಿಲ್ಲೆಯ ಸಂಸದರು, ಕೇಂದ್ರ ಸಚಿವರು ಆಗಿರುವ ಪ್ರಹ್ಲಾದ ಜೋಶಿ, ನವಲಗುಂದ ಕಸೂತಿ ಕಲೆ ಬಗ್ಗೆ, ಸಾಂಸ್ಕೃತಿಕ ಶ್ರೀಮಂತಿಕೆ ಬಗ್ಗೆ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಾರ್ಯಕ್ರಮ ಒಂದರಲ್ಲಿ ವಿವರಿಸಿ, ಕೆಲವು ಸೀರೆಗಳನ್ನು ಜಿಲ್ಲೆಯ ಪರವಾಗಿ ಉಡುಗೊರೆಯಾಗಿ ನೀಡಿದ್ದರು.
ಕೈಮಗ್ಗದಲ್ಲಿ ನೇಯ್ದ ಇಳಕಲ್ ರೇಷ್ಮೆ ಸೀರೆಗಳಿಗೆ ಸಾಂಪ್ರದಾಯಿಕ ಧಾರವಾಡ ಕಸೂತಿ ಹಾಕಲಾಗಿದೆ. ಐದೂವರೇ ಮೀಟರ್ ಉದ್ದದ ಇಳಕಲ್ ಸೀರೆಗೆ ಚಿಕ್ಕಪರಾಸ್ ದಡಿಯಿದ್ದು, ತೇರು, ಗೋಪುರ, ನವಿಲು, ಕಮಲದ ಚಿತ್ರಗಳ ಕಸೂತಿ ಹಾಕಲಾಗಿದೆ.
ಕೈಮಗ್ಗ ಉದ್ಯಮಕ್ಕೆ ಪ್ರೋತ್ಸಾಹಿಸುವ ಮತ್ತು ಸ್ವಯಂ ಉದ್ಯೋಗ ನಿರತ ಮಹಿಳೆಯರನ್ನು ಬೆನ್ನು ತಟ್ಟುವ ಕೇಂದ್ರ ಸಚಿವರ ಈ ನಡೆ ಧಾರವಾಡ ಜನತೆಯ ಖುಷಿಗೆ ಕಾರಣವಾಗಿದೆ.
ಈ ವರ್ಷ ಮಾತ್ರವಲ್ಲ, ಪ್ರತಿವರ್ಷ ಕೂಡ ಬಜೆಟ್ ದಿನ ನಿರ್ಮಲಾ ಸೀತಾರಾಮನ್ ಉಡುವ ಸೀರೆ ಚರ್ಚೆಯಲ್ಲಿರುತ್ತದೆ.
ಧಾರವಾಡ ಕಸೂತಿ ಕಲೆಯಿರುವ ಸೀರೆಯುಟ್ಟು ಕೇಂದ್ರ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ @nsitharaman.
— Pralhad Joshi (@JoshiPralhad) February 1, 2023
ನಮ್ಮ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು (ಮರೂನ್ ಕಲರ್) ಬಣ್ಣದ ಸೀರೆಯುಟ್ಟು ಬಂದು ಅತ್ಯಂತ ಅಭಿವೃದ್ಧಿ ಪೂರಕ ಬಜೆಟ್ ಮಂಡಿಸಿದ್ದು ನಮಗೇಲ್ಲರಿಗೂ ಹೆಮ್ಮೆಯ ವಿಷಯ.#AmritKaalBudget #Budget2023 pic.twitter.com/WMauxOPU2o