ಸಿಡಿ ಪ್ರಕರಣ: ಸಿಬಿಐ ವಹಿಸುವ ಕುರಿತು ಸಿಎಂ ಜತೆ ಚರ್ಚೆ ನಡೆಸುತ್ತೇವೆ | JANATA NEWS
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವಹಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾತುಕತೆ ನಡೆಸಲು ರಮೇಶ್ ಜಾರಕಿಹೊಳಿ ಬಂದಿದ್ದರು.ಸಾಕಷ್ಟು ಮಾಹಿತಿ ನೀಡಿ ಸಿಬಿಐಗೆ ವಹಿಸುವಂತೆ ಮನವಿ ಮಾಡಿದ್ದಾರೆ.ಪ್ರಕರಣವನ್ನು ಸಿಬಿಐಗೆ ಕೊಡಬೇಕೋ ಬೇಡವೋ ಎನ್ನುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಂತರವೇ ನಿರ್ಧರಿಸಲಾಗುತ್ತದೆ ಎಂದರು.
ಯಾರೇ ಆಗಲಿ ಸಿಡಿ ಮೂಲಕ ಯಾರನ್ನಾದರೂ ತೇಜೋವಧೆ ಮಾಡುವುದು ತಪ್ಪು. ಯಾರೂ ಕೂಡ ಯಾರದೇ ತೇಜೋವಧೆ ಮಾಡಬಾರದು. ಒಂದು ವೇಳೆ ಆ ರೀತಿ ಮಾಡಹೊರಟರೆ ಪೊಲೀಸರು ಖಂಡಿತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.