ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ 7 ದೂರು ದಾಖಲೆ! | JANATA NEWS
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ, ಕೆ. ಜೆ. ಜಾರ್ಜ್, ಕೃಷ್ಣ ಭೈರೇಗೌಡ, ರಾಬರ್ಟ್ ವಾದ್ರಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಮತ್ತು ಹಿರಿಯ ಅಧಿಕಾರಿಗಳ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷ ಎನ್. ಆರ್. ರಮೇಶ್ 10 ದೂರುಗಳನ್ನು ದಾಖಲಿಸಿದ್ದಾರೆ.
ಖುದ್ದು ಸಿದ್ದರಾಮಯ್ಯ ವಿರುದ್ಧವೇ 07 ದೂರುಗಳು ದಾಖಲು ಮಾಡಲಾಗಿದೆ. ಸಿದ್ದರಾಮಯ್ಯ, ರಾಬಟ್ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಹಾಗೂ ಹಲವಾರು ಅಧಿಕಾರಿಗಳ ವಿರುದ್ಧ ವಿರುದ್ಧ ಲೋಕಾಯುಕ್ತಕ್ಕೆ 3728 ಪುಟಗಳ ದಾಖಲೆ ಸಮೇತ ದೂರುಗಳ ಸರಮಾಲೆಯನ್ನೇ ಸಲ್ಲಿಸಲಾಗಿದೆ.
ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಪ್ರಪ್ರಥಮವಾಗಿ 10 ವಿವಿಧ ಬೃಹತ್ ಹಗರಣಗಳಿಗೆ ಸಂಬಂಧಿಸಿದಂತೆ, ಪ್ರತ್ಯೇಕವಾದ 10 ದೂರುಗಳನ್ನು ಒಂದೇ ಬಾರಿಗೆ ಲೋಕಾಯುಕ್ತದಲ್ಲಿ ದಾಖಲಿಸಲಾಗಿದೆ ಎಂದು ಎನ್.ಆರ್.ರಮೇಶ್ ತಿಳಿಸಿದ್ದಾರೆ.
2013-2018 ರ ವರೆಗಿನ ಸಿದ್ಧರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ನಡೆದಿರುವ 10 ಬೃಹತ್ ಹಗರಣಗಳಿಗೆ ಸಂಬಂಧಿಸಿದಂತೆ ಒಟ್ಟು 3,728 ಪುಟಗಳ ಸಂಪೂರ್ಣ ದಾಖಲೆಗಳ ಸಹಿತವಾಗಿ ಪ್ರತ್ಯೇಕವಾದ 10 ದೂರುಗಳನ್ನು ಒಂದೇ ಬಾರಿಗೆ ಲೋಕಾಯುಕ್ತದಲ್ಲಿ ದಾಖಲಿಸಿದ್ದಾರೆ.
ಲೋಕಾಯುಕ್ತಕ್ಕೆ 3,728 ಪುಟಗಳ ಸಂಪೂರ್ಣ ದಾಖಲೆಗಳ ಸಹಿತ 10 ದೂರುಗಳನ್ನು ಸಲ್ಲಿಸಲಾಗಿದೆ. 62 ಗಂಟೆಗಳ ಅವಧಿಯ ವಿಡಿಯೋ ತುಣುಕುಗಳು ಮತ್ತು 900 ಕ್ಕೂ ಹೆಚ್ಚು ಛಾಯಾಚಿತ್ರಗಳನ್ನೊಳಗೊಂಡ ಎರಡು ಡಿವಿಡಿಯನ್ನು ಸಲ್ಲಿಸಲಾಗಿದೆ.
ಭ್ರಷ್ಟಾಚಾರ, ವಂಚನೆ, ಅಧಿಕಾರ ದುರುಪಯೋಗ, ನಕಲಿ ದಾಖಲೆ ತಯಾರಿಕೆ ಮತ್ತು ಸರ್ಕಾರಿ ಭೂ ಕಬಳಿಕೆ ಪ್ರಕರಣಗಳು ದಾಖಲಾಗಿದೆ.
ಸಿದ್ದರಾಮಯ್ಯ ವಿರುದ್ಧ 07 ದೂರುಗಳು, ಮಾಜಿ ಸಚಿವ ಕೆ. ಜೆ. ಜಾರ್ಜ್ ವಿರುದ್ಧ 04 ದೂರುಗಳು, ಮಾಜಿ ಸಚಿವ ಯು. ಟಿ. ಖಾದರ್, ಜಮೀರ್ ಅಹಮದ್ ಹಾಗೂ ಕೃಷ್ಣ ಭೈರೇಗೌಡ ವಿರುದ್ಧ ತಲಾ 02 ದೂರುಗಳು, ಮಾಜಿ ಸಚಿವ ಎಂ. ಬಿ. ಪಾಟೀಲ್, ದಿನೇಶ್ ಗುಂಡೂರಾವ್, ಎಂ. ಕೃಷ್ಣಪ್ಪ, ಶಾಸಕರಾದ ಎನ್. ಎ. ಹ್ಯಾರೀಸ್ ಹಾಗೂ ಮಾಜಿ ಶಾಸಕ ಪ್ರಿಯಾ ಕೃಷ್ಣ ರವರುಗಳ ವಿರುದ್ಧ ತಲಾ 01 ದೂರುಗಳು ದಾಖಲಾಗಿವೆ.