ವಿಷ ಸೇವಿಸಿ ಒಂದೇ ಕುಟುಂಬ 7 ಮಂದಿ ಆತ್ಮಹತ್ಯೆಗೆ ಯತ್ನ, ಓರ್ವ ಮಹಿಳೆ ಸಾವು | JANATA NEWS
ರಾಮನಗರ : ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ 7 ಮಂದಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆಯ ತಾಲೂಕಿನ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ನಡೆದಿದೆ.
ಇದರಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಉಳಿದವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಮಹಿಳೆಯನ್ನು 28 ವರ್ಷದ ಮಂಗಳಮ್ಮ ಎಂದು ಗುರುತಿಸಲಾಗಿದೆ.
ತಾವರೆಕೆರೆ ಹೋಬಳಿ ಕುಂಬಳಗೂಡು ಸುಬ್ರಪ್ಪನ ಪಾಳ್ಯ ನೆಲಿಸಿದ್ದ ರಾಜು ಹಾಗೂ ಮಂಗಳಮ್ಮ ದಂಪತಿ ಕಳೆದ ಒಂದು ವರ್ಷದಿಂದ ದೊಡ್ಡಮಣ್ಣು ಗುಡ್ಡೆ ಗ್ರಾಮದಲ್ಲಿ ನೆಲೆಸಿದ್ದರು. ಇದೀಗ ಸಾಲಗಾರರ ಕಾಟಕ್ಕೆ ಹೆದರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಈ ಪೈಕಿ ಮಂಗಳಮ್ಮು ಮೃತಪಟ್ಟಿದ್ದು ಇನ್ನುಳಿದ ಆರು ಮಂದಿ ಪರಿಸ್ಥಿತಿ ಗಂಭೀರವಾಗಿದ್ದು ಮಂಡ್ಯ ಮಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳಮ್ಮ (28) ಮೃತ ದುರ್ದೈವಿ. ಪತಿ ರಾಜು (32) ಮಕ್ಕಳಾದ ಆಕಾಶ್ (9), ಕೃಷ್ಣ (13), ಸವಿತಾ (24) ಸವಿತಾಳ ಮಗಳು ದರ್ಶಿನಿ (4) ಹಾಗೂ ಸೊಲ್ಲಾಪುರದಮ್ಮ (48) ಇಲಿ ಪಾಷಣ ಸೇವಿಸಿದವರು.
ಮೃತ ಮಂಗಳಮ್ಮಳ ಪತಿ ರಾಜು 11 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ. ಸಲಾಗಾರರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಹೀಗಾಗಿ ಬೆಂಗಳೂರು ಬಿಟ್ಟು ರಾಮನಗರಕ್ಕೆ ತೆರಳಿದ್ದರು. ಸಾಲಗಾರರ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತ ರಾಜು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದಾನೆ ಎನ್ನಲಾಗಿದೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.