ಚುನಾವಣೆಗೆ ಭವಿಷ್ಯ ನುಡಿದ ಕೊಡಿಶ್ರೀ: ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ | JANATA NEWS
ಬೆಂಗಳೂರು : ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಜಿಗಳು ಮತ್ತೊಂದು ರಾಜಕೀಯ ಭವಿಷ್ಯ ನುಡಿದಿದ್ದಾರೆ. ಈ ಭವಿಷ್ಯ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ.
ಯುಗಾದಿ ನಂತರ ಪ್ರಕೃತಿ ವಿಕೋಪ ಆಗೋದಿಲ್ಲ ಅಂತ ಹೇಳೋದಿಲ್ಲ. ರಾಜಕೀಯ ಅಸ್ಥಿರತೆ ಇದೆ ಯಾವ ಪಕ್ಷವೂ ಕೂಡಿ ಹೋಗೋದು ಕಷ್ಟ. ಚುನಾವಣೆವರೆಗೂ ಏನು ಹೇಳೋಕೆ ಆಗೋದಿಲ್ಲ. ಎಲ್ಲ ಡಿವೈಡ್ ಆಗುವ ಲಕ್ಷಣ ಇದೆ. ಆದರೂ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ. ಮಾಡಬಾರದ್ದು ಮಾಡಿದರೆ ಆಗಬಾರದ್ದು ಆಗುತ್ತದೆ. ಯಾರೆ ಆಗಲಿ ತಪ್ಪು ಇರಲಿ ಸರಿ ಇರಲಿ, ನಾವು ಏನು ಮಾಡುತ್ತೇವೆ ಬಿತ್ತಿದ್ದೆ ಬೆಳೆಯೋದು ಎಂದು ಅವರು ಹೇಳಿದರು.
ಮುಂದೆ ಎಷ್ಟು ಸುಖವಿದೆಯೋ ಅಷ್ಟೇ ಕಷ್ಟವೂ ಇದೆ. ಒಲೆ ಹತ್ತಿ ಉರಿದರೆ ಆರಬಹುದು. ಆದರೆ ಧರೆ ಹೊತ್ತಿ ಉರಿದರೆ ಆರುವುದಿಲ್ಲ. ನಾನು ಹೇಳಿದ ಮರುದಿನವೇ ಪ್ಲೈಟ್ ಅಪಘಾತವಾಗಿದೆ. ಅದರಲ್ಲಿ ಐವತ್ತು ಜನ ಸತ್ತರು. ಯುಗಾದಿ ಬಂದ ನಂತರ ಎಲ್ಲಾ ಸವಿಸ್ತಾರವಾಗಿ ಹೇಳುತ್ತೇನೆ ಎಂದಿದ್ದಾರೆ.