ವಾಂತಿ ಭೇದಿಯಿಂದ ಆಸ್ಪತ್ರೆ ಸೇರಿದ್ದ ಜ್ಯೂನಿಯರ್ ಡ್ಯಾನ್ಸರ್ ಸಾವು! | JANATA NEWS
ಬೆಂಗಳೂರು : ವಾಂತಿ-ಭೇದಿ ಎಂದು ಆಸ್ಪತ್ರೆಗೆ ದಾಖಲಾಗಿದ್ದ ಜೂನಿಯರ್ ಡ್ಯಾನ್ಸರ್ ಮೃತಪಟ್ಟ ಘಟನೆ ನಡೆದಿದೆ. ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಸಿಂಚನಾ ಕುಟುಂಬಸ್ಥರು ಆರೋಪಿಸಿದ್ದಾರೆ.
ಎಸ್ಎಸ್ಎಲ್ಸಿ ಓದಿದ್ದ ಸಿಂಚನಾ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಜೊತೆಗೆ ಕೆಲವು ಸಿನಿಮಾಗಳಲ್ಲಿ ಜ್ಯೂನಿಯರ್ ಡ್ಯಾನ್ಸರ್, ಸಹಕಲಾವಿದೆ ಆಗಿ ಕೆಲಸ ಮಾಡಿದ್ದಳು.
ವಾಂತಿ, ಭೇದಿಯಿಂದ ಬಳಲುತ್ತಿದ್ದ ಸಿಂಚನಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆಕೆ ಸಾವಿಗೀಡಾಗಿದ್ದಾಳೆ. ಸಿಂಚನಾ ಮೃತಪಟ್ಟಿದ್ದು ವೈದ್ಯರೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
ಸಿಂಚನಾ ಆಸ್ಪತ್ರೆಗೆ ದಾಖಲಾಗುವಾಗಲೇ ಮೃತಪಟ್ಟಿದ್ದಾರೆ ಎಂದು ಎಸ್.ಕೆ.ಹೆಲ್ತ್ಕೇರ್ ಆಸ್ಪತ್ರೆ ವೈದ್ಯರು ಹೇಳಿಕೆ ನೀಡಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.