ಬಹುಮಹಡಿ ಕಟ್ಟಡದಲ್ಲಿ ವಿದ್ಯುತ್ ತಗುಲಿ ಕಾರ್ಮಿಕರಿಬ್ಬರ ಸಾವು | JANATA NEWS
ಬೆಂಗಳೂರು : ಬೆಂಗಳೂರಿನ ಕೋಣನಕುಂಟೆಯ ಅಪಾರ್ಟ್ ಮೆಂಟ್ ಒಂದರಲ್ಲಿ ನಲ್ಲಿ ಚರಂಡಿ ಒಳಗೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ.
ಅಸ್ಸಾಂ ಮೂಲದ ದಿಲೀಪ್ ಹಾಗೂ ತುಮಕೂರು ಜಿಲ್ಲೆಯ ಮಧುಗಿರಿಯ ರಘು ಮೃತಪಟ್ಟ ಕಾರ್ಮಿಕರು ಎಂದು ಗುರುತಿಸಲಾಗಿದೆ. ಕಟ್ಟಡದಲ್ಲಿ ರಾತ್ರಿ ವೇಳೆ ಎಸ್ಟಿಪಿಯಲ್ಲಿ ಕೆಲಸ ಮಾಡುತ್ತಿದ್ದಾಗ ಕರೆಂಟ್ ಶಾಕ್ ತಗುಲಿದೆ. ಇದರಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತದೇಹಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Two workers died due to electrocution in multi-storied building