ನೇಣು ಬಿಗಿದುಕೊಂಡು ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ | JANATA NEWS
ಉತ್ತರ ಕನ್ನಡ : ನೇಣು ಬಿಗಿದುಕೊಂಡು ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಸರಕೋಡ ಸಮೀಪದ ಇಕೋ ಬೀಚ್ ಬಳಿ ನಡೆದಿದೆ.
ರಾಮ ನಾಗೇಶ ಗೌಡ(32) ಮೃತ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಸಿಬ್ಬಂದಿ.
ಆತ್ಮಹತ್ಯೆ ಮಾಡಿಕೊಂಡಿರುವ ರಾಮ ನಾಗೇಶ್ ಗೌಡ ಕುಮಟಾ ತಾಲೂಕಿನ ನಾಡುಮಾಸ್ಕೇರಿ ಮೂಲದವರಾಗಿದ್ದ, ಕುಂದಾಪುರ ಪೊಲೀಸ್ ಠಾಣೆಯ ಕರ್ತವ್ಯ ನಿರ್ವಹಿಸುತ್ತಿದ್ದರು.
ಇತ ಜೂಜು, ಆನ್ಲೈನ್ ಆಟದಿಂದ ಸಾಲ ಮಾಡಿಕೊಂಡಿದ್ದನಂತೆ. ಕಳೆದ ಐದು ದಿನಗಳಿಂದ ರಾಮ ನಾಗೇಶ್ ಗೌಡ ಮನೆಯಲ್ಲೂ ಇರದೇ ಕರ್ತವ್ಯಕ್ಕೂ ಹಾಜರಾಗಿರಲಿಲ್ಲ. ಹೀಗಾಗಿ ಎಲ್ಲರೂ ಹುಡುಕಾಟ ಆರಂಭಿಸಿದ್ದರು. ಈ ವೇಳೆ ಹೊನ್ನಾವರದ ಕಾಸರಕೋಡ ಇಕೋ ಬೀಚ್ ಪರಿಸರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.