ಡಾ.ಪುನೀತ್ ರಾಜ್ ಕುಮಾರ್ ರಸ್ತೆ ನಾಮಕರಣ : ಪುನೀತ್ ಸ್ಮಾರಕ ಮಾಡೋದಾಗಿ ಸಿಎಂ ಬೊಮ್ಮಾಯಿ ಘೋಷಣೆ | JANATA NEWS
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಸಂಜೆ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಪುನೀತ್ ರಾಜ್ ಕುಮಾರ್ ರಸ್ತೆ ನಾಮಕರಣ, ಅಶೋಕ ಸ್ತಂಭ ಉದ್ಯಾನವನ, ಶ್ರೀ ಗುರು ಶಂಕರ ಉದ್ಯಾನವನ, ನವೀಕರಣಗೊಂಡಿರುವ ಅಟಲ್ ಬಿಹಾರಿ ವಾಜಪೇಯಿ ಆಟದ ಮೈದಾನ, ಧೋಭಿಘಾಟ್ ವಸತಿ ಸಮುಚ್ಚಯ ಹಾಗೂ ಹನುಮಾನ್ ಚಾಲೀಸ ಕ್ರೀಡಾಂಗಣವನ್ನು ಉದ್ಘಾಟಿಸಿದರು.
ನಗರದ ಮೈಸೂರು ರಸ್ತೆಯಿಂದ ಬನ್ನೇರುಘಟ್ಟವರೆಗಿನ ರಸ್ತೆಗೆ ಪುನೀತ್ ಹೆಸರನ್ನು ಇಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕಾರ್ಯಕ್ರಮದಲ್ಲಿ ರಸ್ತೆ ಪಲಕ ಉದ್ಘಾಟನೆ ಮಾಡಿದ್ದಾರೆ. ರಾಜ್ಯ ಸರ್ಕಾರ ಈ ಕುರಿತು ಘೋಷಣೆ ಮಾಡಿ ಬಹುತೇಕ ಒಂದು ವರ್ಷದ ಬಳಿಕ ಅಧಿಕೃತವಾಗಿ ನಾಮಕರಣ ಉದ್ಘಾಟಿಸಲಾಗಿದೆ.
ನಟ ಪುನೀತ್ ರಾಜ್ಕುಮಾರ್ ನಿಧನರಾಗಿ ವರ್ಷಗಳೇ ಕಳೆದು ಹೋಗಿದೆ. ಅಪ್ಪುವನ್ನು ಅಭಿಮಾನಿಗಳು ಈಗಲೂ ಮನದಲ್ಲಿಟ್ಟು ಪೂಜೆ ಮಾಡುತ್ತಿದ್ದಾರೆ. ಪುನೀತ್ ರಾಜ್ಕುಮಾರ್ ಅವರನ್ನು ಹಲವು ರೀತಿಗಳನ್ನು ನೆನಪು ಮಾಡಿಕೊಳ್ತಿದ್ದಾರೆ. ರಸ್ತೆ, ಸರ್ಕಲ್ ಹಾಗೂ ಪಾರ್ಕ್ಗಳಿಗೂ ಪುನೀತ್ ರಾಜ್ಕುಮಾರ್ ಅವರ ಹೆಸರನ್ನು ಇಡಲಾಗುತ್ತಿದೆ. ಇದೀಗ ಮೈಸೂರು ರಸ್ತೆಯಿಂದ ಬನ್ನೇರುಘಟ್ಟವರೆಗಿನ ರಸ್ತೆಗೆ ಪುನೀತ್ ಹೆಸರು ಇಡಲಾಗಿದ್ದು, ಈಗ ಸಿಎಂ ಬಸವರಾಜ ಬೊಮ್ಮಾಯಿ ಪುನೀತ್ ಸ್ಮಾರಕ ಮಾಡೋದಾಗಿ ಘೋಷಣೆ ಮಾಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಚಿವ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ, ನಟರಾದ ರಾಘವೇಂದ್ರ ರಾಜ್ ಕುಮಾರ್, ಅಭಿಷೇಕ್ ಅಂಬರೀಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಮೊದಲಾದವರು ಉಪಸ್ಥಿತರಿದ್ದರು.