ಹೊಡಿ, ಬಡಿ, ಕಡಿ ಅನ್ನೋದು ಬಿಜೆಪಿ ಸಂಸ್ಕೃತಿ, ಮಹಾತ್ಮ ಗಾಂಧೀಜಿಯವರನ್ನೇ ಕೊಂದವರು ಇವರು | JANATA NEWS
ಹುಬ್ಬಳ್ಳಿ : ಟಿಪ್ಪು ಸುಲ್ತಾನ್ನನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು ಎಂದಿರುವ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಮಾಜಿ ಮುಖ್ಯಮಂತ್ರಿ ಕಿಡಿಕಾರಿದ್ದಾರೆ.
ಹೊಡಿ, ಬಡಿ, ಕಡಿ ಅನ್ನೋದು ಬಿಜೆಪಿ ಸಂಸ್ಕೃತಿ. ಮಹಾತ್ಮ ಗಾಂಧೀಜಿಯವರನ್ನೇ ಕೊಂದವರು ಇವರು. ಆರ್ಎಸ್ಎಸ್ನವರು ಸಚಿವ ಅಶ್ವತ್ಥನಾರಾಯಣ್ ಬಾಯಿಯಿಂದ ಹೀಗೆ ಹೇಳಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಡಾ ಅಶ್ವತ್ಥನಾರಾಯಣ್ ಅವರ ಹೇಳಿಕೆ ವಿರುದ್ಧ ಹರಿಹಾಯ್ದಿದ್ದಾರೆ.
ರಾಜ್ಯದಲ್ಲಿ ಚರ್ಚೆಯಾಗಬೇಕಿರುವುದು ಅಭಿವೃದ್ಧಿ ವಿಚಾರ. ರೈತರ, ಬಡವರ ದಲಿತರು ಅಲ್ಪಸಂಖ್ಯಾತರ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕು. ಅದನ್ನು ಬಿಟ್ಟು ಇಂತಹ ಹೇಳಿಕೆ ನೀಡಿ ಸಮಾಜದಲ್ಲಿ ಗೊಂದಲ ಹುಟ್ಟಿಸುತ್ತಿದ್ದಾರೆ. ಇವರು ಚುನಾವಣಾ ಪ್ರಣಾಳಿಕೆಯಲ್ಲಿ ಬೇಕಿದ್ದರೆ, ಈ ಚುನಾವಣೆ ಟಿಪ್ಪು ವರ್ಸಸ್ ಸಾವರ್ಕರ್ ನಡುವೆ ಎಂದು ಬರೆದುಕೊಳ್ಳಲಿ. ಈ ಬಗ್ಗೆ ಜನ ತೀರ್ಮಾನ ಮಾಡಲಿ. ಜನ ಇಂತಹದಕ್ಕೆಲ್ಲ ಪ್ರೋತ್ಸಾಹ ಕೊಡೋಕೆ ಆಗುತ್ತಾ..? ಎಂದು ಪ್ರಶ್ನಿಸಿದ್ದಾರೆ.
"ಸಿದ್ಧರಾಮಯ್ಯನನ್ನು ಮುಗಿಸಲಿ ಎಂದರೆ ಏನರ್ಥ, ಎಲ್ಲರೂ ಇದನ್ನು ಖಂಡಿಸಬೇಕು. ಒಬ್ಬ ಸಚಿವನಾಗಿ ಈ ರೀತಿ ಹೇಳಿಕೆ ಕೊಡೋದು ಎಷ್ಟರ ಮಟ್ಟಿಗೆ ಸರಿ? ಪ್ರಜೆಗಳಿಗೆ ರಕ್ಷಣೆ ಕೊಡೋದು ಸಚಿವರು ಹಾಗೂ ಸರ್ಕಾರದ ಜವಾಬ್ದಾರಿ. ಟಿಪ್ಪುವನ್ನು ಮುಗಿಸಿದ ಹಾಗೆ ಸಿದ್ಧರಾಮಯ್ಯನನ್ನು ಮುಗಿಸಿ ಎಂದರೆ ಏನರ್ಥ. ಪೊಲೀಸರು ಇದನ್ನು ಸ್ವ ಮೋಟೋ ಪ್ರಕರಣ ದಾಖಲಿಸಿಕೊಳ್ಳಬೇಕು. ಪ್ರಧಾನಿ, ಅಮಿತ್ ಶಾ ಹೇಳಲಿ ಇದು ಸರೀನಾ ಅಂತಾ. ಸಿದ್ಧರಾಮಯ್ಯನನ್ನು ರಕ್ಷಿಸಬೇಕಾದವರೇ ಮುಗಿಸಿ ಅಂತಾ ಕರೆ ಕೊಟ್ಟರೆ ಏನರ್ಥ? ನಾನು ದೂರು ಕೊಡೋಕೆ ಹೋಗಲ್ಲ ಎಲ್ಲ ಸರ್ಕಾರಕ್ಕೆ ಬಿಟ್ಟಿದ್ದೇನೆ" ಎಂದರು.
ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ.. ನನ್ನನ್ನು ಕೊಲ್ಲಬೇಕು ಎಂದು ಮನವಿ ಮಾಡಿರುವ ಮಾನಸಿಕ ಅಸ್ವಸ್ಥ ಅಶ್ವಥ್ ನಾರಾಯಣ್ ವಿರುದ್ಧ ಕನ್ನಡಿಗರಿಗೆ ಕೋಪ ಬಂದಿದೆ ಅಂತಾ ನನಗೆ ಗೊತ್ತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಿಂದ ಅವರನ್ನು ವಜಾ ಮಾಡಬೇಕು. ಕೂಡಲೇ ಕರ್ನಾಟಕ ಸರ್ಕಾರ ಅಶ್ವಥ್ ನಾರಾಯಣ್ರನ್ನು ಬಂಧಿಸಬೇಕು. ಒಂದು ವೇಳೆ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಅಶ್ವಥ್ ನಾರಾಯಣ್ ಮಾತಿಗೆ ಬಿಜೆಪಿಯ ಸಹಮತ ಇದೆ ಎಂದರ್ಥ. ಅಥವಾ ಅಶ್ವಥ್ ನಾರಾಯಣ್ ಮಾನಸಿಕವಾಗಿ ಸರಿ ಇಲ್ಲ ಎಂದು. ಯಾಕೆ ನೀವು ಜನರನ್ನು ಪ್ರಚೋದಿಸುತ್ತೀರಿ. ನೀವು ಗನ್ ತೆಗೆದುಕೊಳ್ಳಿ ಎಂದು ವಾಗ್ದಾಳಿ ನಡೆಸಿದ್ದಾರೆ.
.@CMofKarnataka @BSBommai should immediately initiate action to sack him from the cabinet & arrest. If no action is taken, it only means that BJP is in agreement with the appeal or they think Ashwath Narayan has become 'Mentally Unstable'
— Siddaramaiah (@siddaramaiah) February 16, 2023
ಮಾನಸಿಕ ಅಸ್ವಸ್ಥನಾದ ಅಶ್ವಥ್ ನಾರಾಯಣ