ಸುರ್ಜೇವಾಲ ಕಾಂಗ್ರೆಸ್ಸಿನ ಒಳಜಗಳವನ್ನು ಮೊದಲು ಸರಿಪಡಿಸಲಿ: ಸಿಎಂ ಬೊಮ್ಮಾಯಿ | JANATA NEWS
ಹುಬ್ಬಳ್ಳಿ : ಕಾಂಗ್ರೆಸ್ಸಿನ ರಣದೀಪ್ ಸುರ್ಜೇವಾಲ ಅವರಿಗೆ ಕರ್ನಾಟಕದ ಬಗ್ಗೆ ಏನು ಗೊತ್ತಿದೆ. ಅವರು ಕಾಂಗ್ರೆಸ್ಸಿನ ಒಳಜಗಳವನ್ನು ಮೊದಲು ಸರಿಪಡಿಸಲಿ ಆಮೇಲೆ ಕರ್ನಾಟಕದ ಬಗ್ಗೆ ಮಾತನಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನೇತೃತ್ವದ ಸರ್ಕಾರ ನರಕ ಸೃಷ್ಟಿಯಾಗಿದೆ ಎಂದಿರುವ ಸುರ್ಜೇವಾಲಾ ಅವರ ಹೇಳಿಕೆಗೆ ಉತ್ತರಿಸಿದ ಬೊಮ್ಮಾಯಿ ಅವರು,ನೇತೃತ್ವದ ಸರ್ಕಾರ ನರಕ ಸೃಷ್ಟಿಯಾಗಿದೆ ಕಾಂಗ್ರೆಸ್ ಸೃಷ್ಟಿಸಿದ್ದ ನರಕದಿಂದಲೇ ಅವರನ್ನು ಮನೆ ಜನ ಕಳುಹಿಸಿದ್ದಾರೆ.
ಅತ್ಯಂತ ಬೇಜವಾಬ್ದಾರಿ ವಿರೋಧ ಪಕ್ಷವಿದು. ಜನರಿಗೆ ತಮ್ಮ, ನಮ್ಮ ವೈಫಲ್ಯಗಳನ್ನು ತೋರಿಸುವ ಬದಲು ಈ ರೀತಿಯ ಮಾತುಗಳು ಜನರ ಮೇಲೆ ಪ್ರಭಾವ ಬೀರುವುದಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ಘೋಷಣೆ ಮಾಡುತ್ತಿರುವ ಕೆಲ ಯೋಜನೆಗಳು ನಮ್ಮಿಂದ ನಕಲು ಮಾಡಿದ್ದಾರೆ. ನಮ್ಮ ಯೋಜನೆಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದೇವೆ. ಗೃಹಿಣಿ ಶಕ್ತಿ ಕೊಡುವುದಾಗಿ ಹೇಳಿದ ಮೇಲೆ ಇವರು ಗೃಹಲಕ್ಷ್ಮಿ ಮಾಡಿದರು. ಅವರ ಯೋಜನೆ ಗೂ ನಮ್ಮಗೂ ಬಹಳ ವ್ಯತ್ಯಾಸ ಇದೆ. ಕಾಂಗ್ರೆಸ್ ನವರು ಚುನಾವಣೆ ಆಕಾಶ ತೊರಿಸುತ್ತಿದ್ದಾರೆ, ಜನರನ್ನು ಮರಳು ಮಾಡುವ ಪ್ರಯತ್ನ ಮಾಡುತ್ತಾರೆ ಎಂದರು.
ಯಾರು ಅಸುರರು, ಯಾರು ದೇವತೆಗಳು ಎಂದು ಗೊತ್ತಿದೆ. 70 ವರ್ಷ ಆಡಳಿತ ಮಾಡಿರುವ ಕಾಂಗ್ರೆಸ್ ನ್ನು ಕಿತ್ತೊಗೆದು ಅಸುರರು ಯಾರೆಂದು ತೋರಿಸಿದ್ದಾರೆ. ಕಾಂಗ್ರೆಸ್ ನಲ್ಲಿರುವ ಅಸುರರ ದೊಡ್ಡ ಪಟ್ಟಿಯೇ ಇದೆ ಎಂದರು.
ನಕಲು ಮಾಡುವಾಗ ಬುದ್ದಿ ಇರಬೇಕೆಂದಿರುವ ಹೇಳಿಕೆಗೆ ಉತ್ತರಿಸಿ ಅವರಿಗೂ ನಮಗೂ ಬಹಳ ವ್ಯತ್ಯಾವಿದೆ. ಅವರು ಚುನಾವಣೆಗಾಗಿ ಆಕಾಶವನ್ನು ತೋರಿಸಿ ಜನರನ್ನು ಮರಳು ಮಾಡುವ ಪ್ರಯತ್ನ ಮಾಡಿದ್ದಾರೆ. ನಾವು ಯಾವುದಕ್ಕಾಗಿ, ಯಾರಿಗೆ, ಎಷ್ಟು ಹಣವಾಗುತ್ತದೆ ಎಂದು ವಿವರಿಸಿದ್ದೇವೆ.ಸುರ್ಜೇವಾಲಾ ಅವರಿಗೆ ನೆನಪಿನ ಶಕ್ತಿ ಕಡಿಮೆಯಾಗಿದೆ ಎಂದರು.