ರೂಪಾ ವಿರುದ್ಧ ನಿರ್ಬಂಧಕಾಜ್ಞೆ ವಿಧಿಸಲು ಕೋರ್ಟ್ ಮೊರೆಹೋದ ರೋಹಿಣಿ ಸಿಂಧೂರಿ | JANATA NEWS
ಬೆಂಗಳೂರು : ರೋಹಿಣಿ ಸಿಂಧೂರಿ ಡಿ.ರೂಪಾ ವಿರುದ್ಧ ಕೋರ್ಟ್ ಮೊರೆಹೋಗಿದ್ದಾರೆ. ಕರ್ನಾಟಕ ಸರ್ಕಾರ ಇಬ್ಬರೂ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿತ್ತು.
ರೂಪಾ ಅವರು ನನ್ನ ಖಾಸಗಿ ಮೊಬೈಲ್ ನಂಬರ್ , ಫೋಟೋ, ವಿಳಾಸವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
ರೂಪಾ ಮೌದ್ಗಿಲ್ ನನ್ನ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ನನ್ನ ಮೊಬೈಲ್ ನಂಬರ್ ಸಾರ್ವಜನಿಕಗೊಳಿಸಿದ್ದಾರೆ. ಇದರಿಂದಾಗಿ ನನಗೆ ನೂರಾರು ಕರೆ ಬರುತ್ತಿವೆ. ಇದರಿಂದ ನನ್ನ ವೈಯಕ್ತಿಕ ವಿಚಾರಕ್ಕೆ ಧಕ್ಕೆಯಾಗುತ್ತಿದೆ. ರೋಹಿಣಿ ಸಿಂಧೂರಿ ರೂಪಾ ಅವರು ತಮ್ಮ ಬಗ್ಗೆ ವಿಚಾರ ಪ್ರಸ್ತಾಪ ಮಾಡದಂತೆ ನಿರ್ಬಂಧಕಾಜ್ಞೆ ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ರೂಪಾ ಮೌದ್ಗಿಲ್ ಸಾಮಾಜಿಕ ಜಾಲತಾಣದ ಮೂಲಕ ನನ್ನ ವೈಯಕ್ತಿತ ತೇಜೋವಧೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.