ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಬಿಗ್ ರಿಲೀಫ್, ರೋಹಿಣಿ-ರೂಪಾ ಇಬ್ಬರೂ ಪರಸ್ಪರ ಮಾತನಾಡದಂತೆ ತಡೆಯಾಜ್ಞೆ! | JANATA NEWS
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವಿನ ಜಟಾಪಟಿಗೆ ಕೋರ್ಟ್ ಬ್ರೇಕ್ ಹಾಕಿದೆ.
ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ರೋಹಿಣಿ ಸಿಂಧೂರಿನ ನಡುವಿನ ಕಿತ್ತಾಟಕ್ಕೆ 74ನೇ ಸಿಸಿಹೆಚ್ ಕೋರ್ಟ್ ಬ್ರೇಕ್ ನೀಡಿದೆ. ಡಿ.ರೂಪಾ ಅವರು ತಮ್ಮ ಮೇಲೆ ಸೋಶಿಯಲ್ ಮೀಡಿಯಾ ಹಾಗೂ ಮಾಧ್ಯಮಗಳ ಮೂಲಕ ತೇಜೋವಧೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಮಾತಾಡದಂತೆ ನಿರ್ಬಂಧಕಾಜ್ಞೆ ನೀಡಬೇಕು ಅಂತಾ ಕೋರಿ ಸಿಂಧೂರಿ ಕೋರ್ಟ್ ಮೆಟ್ಟಿಲೇರಿದ್ದರು.
ನಿನ್ನೆ ವಿಚಾರಣೆ ನಡೆಸಿದ್ದ ಕೋರ್ಟ್, ಇವತ್ತಿಗೆ ತೀರ್ಪು ಕಾಯ್ದಿರಿಸಿತ್ತು. ಇಂದು ಮಧ್ಯಾಹ್ನದ ವೇಳೆಗೆ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಸೋಶಿಯಲ್ ಮೀಡಿಯಾ ಹಾಗೂ ಕೆಲ ಮಾಧ್ಯಮಗಳಿಗೆ ಸಿಂಧೂರಿ ಹಾಗೂ ರೂಪಾ ನಡುವಿನ ಕಿತ್ತಾಟದ ಸುದ್ದಿಯನ್ನು ಪ್ರಸಾರ ಮಾಡದಂತೆ ತಡೆ ನೀಡಿದೆ.
ಇಂದು ಅರ್ಜಿಯ ವಿಚಾರಣೆ ಕೈಗೆತ್ತಕೊಂಡ ಕೋರ್ಟ್, ಡಿ ರೂಪಾ ಸೇರಿದಂತೆ ಎಲ್ಲಾ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಅರ್ಜಿದಾರರ ವಿಚಾರವನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ನೀಡಿದೆ.
ಅಲ್ಲದೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರ ವಕೀಲರ ವಾದ ಆಲಿಸಿದ್ದ ಕೋರ್ಟ್, ತಡೆಯಾಜ್ಞೆ ನೀಡುವ ಮುನ್ನ ಡಿ ರೂಪಾ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ. ಅರ್ಜಿಯ ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಿದೆ. ಎರಡು ಕಡೆ ವಾದ ಆಲಿಸಿದ ಬಳಿಕ ಕೋರ್ಟ್ ಅಂತಿಮ ಆದೇಶವನ್ನು ನೀಡಲಿದೆ.