ಒಂದೇ ಕುಟುಂಬದ ಮೂವರ ಆತ್ಮಹತ್ಯೆ | JANATA NEWS
ಹಾವೇರಿ : ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸವಣೂರು ತಾಲ್ಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ.
ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರನ್ನು ಒಂದೇ ಕುಟುಂಬದ ತಂದೆ ಹನುಮಂತಗೌಡ ಪಾಟೀಲ (54 ವ) ತಾಯಿ ಲಲಿತಾ ಪಾಟೀಲ (50 ವ) ಮತ್ತು ಮಗಳು ನೇತ್ರಾ ಪಾಟೀಲ (22 ವ) ಎಂದು ತಿಳಿದು ಬಂದಿದೆ.
ಮನೆ ನಿರ್ಮಾಣಕ್ಕಾಗಿ ಸಾಲ, ಮಗಳ ವಿದ್ಯಾಭ್ಯಾಸಕ್ಕಾಗಿ ಹಾಗೂ ಅವಳ ಮದುವೆಗಾಗಿ ಸಾಲ ಮಾಡಿಕೊಂಡು ಹೈರಾಣಾಗಿದ್ದ ಕುಟುಂಬ ಕಳೆದ ಒಂದು ತಿಂಗಳಿನಿಂದ ಆತ್ಮಹತ್ಯೆ ಮಾಡಿಕೊಳ್ಳಲು ಹಲವು ಭಾರಿ ಯತ್ನಿಸಿದ್ದರು ಎನ್ನಲಾಗಿದೆ.
ಹನುಮಂತೆಗೌಡ ಪಿತ್ರಾರ್ಜಿತವಾಗಿ ಬಂದಿದ್ದ ಒಂದು ಏಕರೆ ಜಮಿನನ್ನು ಮಾರಾಟ ಮಾಡಿ ಕೃಷಿ ಜತೆಗೆ ತರಕಾರಿ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ದೊಡ್ಡ ಪ್ರಮಾಣದಲ್ಲಿ ತರಕಾರಿ ವ್ಯಾಪಾರ ಮಾಡಲು ಹೊಸದಾಗಿ ಟಾಟಾ ಎಸಿ ತೊಗೊಂಡಿದ್ದರು. ಆದರೆ ವ್ಯಾಪಾರದಲ್ಲಿ ನಷ್ಟ ಅನುಭವಿಸಿದ್ದ ಹಿನ್ನಲೆ ಕುಟುಂಬಸ್ಥರು ನೇಣಿಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಸವಣೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.