ಕರ್ತವ್ಯದಲ್ಲಿದ್ದಾಗ ಆಟೋ ಡಿಕ್ಕಿಯಾಗಿ ಎಎಸ್ಐ ಮಿದುಳು ನಿಷ್ಕ್ರಿಯ, ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ | JANATA NEWS
ಬೆಂಗಳೂರು : ಆಟೋದಲ್ಲಿ ಬಂದು ಕರ್ತವ್ಯ ನಿರತ ಎಎಸ್ಐಗೆ ಡಿಕ್ಕಿ ಹೊಡೆದಿದ್ದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಎಎಸ್ಐ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಕಳೆದ ಎರಡು ದಿನಗಳಿಂದ ನಾಗರಾಜ್ ಮಣಿಪಾಲ್ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ. ಈಗ ಬ್ರೈನ್ ಡೆಡ್ ಆಗಿ ನಾಗರಾಜು ಸಾವನ್ನಪ್ಪಿದ್ದು, ಕುಟುಂಬಸ್ಥರು ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದಾರೆ.
ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿರುವ ನಾಗರಾಜ್ ಭಾನುವಾರ ಮಧ್ಯಾಹ್ನ ಸಂಜೆ 4 ಗಂಟೆ ವೇಳೆಗೆ ಚಾಲುಕ್ಯ ಸರ್ಕಲ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅರಮನೆ ರಸ್ತೆಯ ಸಿಐಡಿ ಕಡೆಯಿಂದ ಚಾಲುಕ್ಯ ವೃತ್ತಕ್ಕೆ ವೇಗವಾಗಿ ಬರುತ್ತಿದ್ದ ಆಟೋ ಏಕಾಏಕಿ ಇವರಿಗೆ ಡಿಕ್ಕಿಯಾಗಿದೆ. ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿತ್ತು.