ಮಂಗಳೂರು ಕುಕ್ಕರ್ ಬಾಂಬ್, ಕೊಯಮತ್ತೂರು ಸ್ಫೋಟದ ಹೊಣೆ ಹೊತ್ತ ISIS ಸಂಘಟನೆ! | JANATA NEWS
ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಹಾಗೂ ತಮಿಳುನಾಡಿನ ಕೊಯಮತ್ತೂರು ಸ್ಫೋಟದ ಹೊಣೆಯನ್ನು ಕೊನೆಗೂ ಐಎಸ್ಐಎಸ್ ಉಗ್ರ ಸಂಘಟನೆ ಹೊತ್ತಿದೆ.
ಮಂಗಳೂರಿನ ಕದ್ರಿ ದೇವಾಲಯದ ಮೇಲೆ ದಾಳಿ ಮಾಡುವ ಉದ್ದೇಶದಿಂದ ಶಂಕಿತ ಉಗ್ರ ಶಾರೀಕ್ ಕುಕ್ಕರ್ ನಲ್ಲಿ ಬಾಂಬ್ ಇಟ್ಟುಕೊಂಡು ಹೋಗುತ್ತಿದ್ದಾಗ ಕಂಕನಾಡಿ ಬಳಿ ಅಚಾನಕ್ ಆಗಿ ಸ್ಫೋಟವಾಗಿ ದೊಡ್ಡ ಅನಾಹುತ ತಪ್ಪಿತ್ತು.
ಇನ್ನು ತಮಿಳುನಾಡಿನ ಕೊಯಮತ್ತೂರು ಬಳಿ ಸಹ ಸ್ಫೋಟ ನಡೆಸಿತ್ತು. ಇಸ್ಲಾಮಿಕ್ ಸ್ಟೇಟ್ ಸಂಘಟನೆಯ ಸಹ ಸಂಘಟನೆಯಾದ ಖೊರಾಸನ್ ಪ್ರಾಂತ್ಯದ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ (ಐಎಸ್ಕೆಪಿ) ಈ ದಾಳಿಗಳ ಹೊಣೆ ಹೊತ್ತಿದೆ.
ಕಳೆದ ವರ್ಷ ತಮಿಳುನಾಡಿನ ಕೊಯಂಬತ್ತೂರು ಮತ್ತು ಕರ್ನಾಟಕದ ಮಂಗಳೂರಿನಲ್ಲಿ ನಡೆದ ಸ್ಫೋಟವನ್ನೂ ಐಎಸ್ಗೆ ಸೇರಿದ ಉಗ್ರರು ನಡೆಸಿದ್ದರು ಎಂದು ಹೇಳಿಕೊಂಡಿದೆ.
ಇಸ್ಲಾಮಿಕ್ ಸ್ಟೇಟ್ ವಿಲಾಯಾ ಖೋರಾಸಾನ್ ತನ್ನ ವಾಯ್ಸ್ ಆಫ್ ಖೋರಾಸಾನ್ ನಿಯತಕಾಲಿಕೆಯ 23ನೇ ಸಂಚಿಕೆಯಲ್ಲಿ, ಕಳೆದ ವರ್ಷ ಕರ್ನಾಟಕದ ಮಂಗಳೂರಿನಲ್ಲಿ ನಡೆದ ಸ್ಫೋಟವನ್ನು ಐಎಸ್ ಅಂಗಸಂಸ್ಥೆ ಉಗ್ರಗಾಮಿಗಳು ನಡೆಸಿದೆ ಎಂದು ಹೇಳಿಕೊಂಡಿದೆ.