Sat,May04,2024
ಕನ್ನಡ / English

ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಬಹಿಷ್ಕಾರ ಪ್ರಕರಣ: 12 ಮಂದಿ ಬಂಧನ | JANATA NEWS

10 Mar 2023
2303

ಚಾಮರಾಜನಗರ : ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಗ್ರಾಮದ ಮುಖಂಡರು ಅಮಾನವೀಯವಾಗಿ ನಡೆದುಕೊಂಡು ದಂಪತಿಗೆ ಬಹಿಷ್ಕಾರ ಹಾಕಿದ್ದ ಘಟನೆಗೆ ಸಂಬಂದಿಸಿದಂತೆ 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿದೆ. ಈ ಸಂಬಂಧ ಪೊಲೀಸರು ಈ ಹಿಂದೆ ನಾಲ್ವರನ್ನು ಬಂಧಿಸಿದ್ದರು ಮತ್ತು ಎಂಟು ಆರೋಪಿಗಳು ಶುಕ್ರವಾರ ಪೊಲೀಸರ ಮುಂದೆ ಶರಣಾಗಿದ್ದಾರೆ.

ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕುಣಗಳ್ಳಿಯಲ್ಲಿ ಪ್ರೇಮಿಗಳಿಬ್ಬರು ಅಂತರ್ ಜಾತಿ ವಿವಾಹ ಆಗಿದ್ದಕ್ಕೆ ಗ್ರಾಮದ ಯಜಮಾನರು 3 ಲಕ್ಷ ದಂಡ ಹಾಕಿ ಗ್ರಾಮದಿಂದ ಹೊರ ಉಳಿಯುವಂತೆ ಬಹಿಷ್ಕಾರ ಹಾಕಿದ್ದಾರೆ ಎಂದು ಕೊಳ್ಳೇಗಾಲ ಡಿ.ವೈ.ಎಸ್.ಪಿ ಕಚೇರಿಗೆ ಗೋವಿಂದರಾಜು ಹಾಗೂ ಶ್ವೇತಾ ದೂರು ಕೊಟ್ಟು ಅಳಲು ತೋಡಿಕೊಂಡಿದ್ದರು.

ಗೋವಿಂದರಾಜು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹೂವಿನ ಕೊಪ್ಪಲು ಗ್ರಾಮದ ದಲಿತ ಜನಾಂಗಕ್ಕೆ ಸೇರಿದ ಪ್ರಕಾಶ್ ಎಂಬುವರ ಮಗಳಾದ ಶ್ವೇತಾ ಜೊತೆ ಪರಸ್ಪರ ಪ್ರೀತಿಸಿ ಮನೆಯವರ ಸಮ್ಮುಖದಲ್ಲಿ 5 ವರ್ಷಗಳ ಹಿಂದೆ ಮಳವಳ್ಳಿಯ ಸಬ್ ರಿಜಿಸ್ಟರ್ ಕಚೇರಿಯಲ್ಲಿ ವಿವಾಹ ನೊಂದಣಿ ಮಾಡಿಸಿಕೊಂಡಿದ್ದರು.

ಗೋವಿಂದರಾಜು ಮಳವಳ್ಳಿಯಲ್ಲಿ ಮನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಆಗಾಗ ಗೋವಿಂದರಾಜು ಹಾಗೂ ಶ್ವೇತ ಕುಣಗಳ್ಳಿ ಗ್ರಾಮಕ್ಕೆ ಬಂದು ಹೋಗುತ್ತಿದ್ದು ಐದು ವರ್ಷದಿಂದ ಒಟ್ಟಿಗೆ ಜೀವನ ನಡೆಸುತ್ತಿದ್ದಾರೆ. ಗೋವಿಂದರಾಜು ಅವರ ಮನೆಯಲ್ಲಿ ಅಂತರ್ ಜಾತಿ ವಿವಾಹ ತಿಳಿದಿದ್ದರೂ ಸಹ ಮನೆಯವರು ಯಾರು ಸಹ ತೊಂದರೆ ನೀಡಲಿಲ್ಲ. ತಿಂಗಳಿಗೆ 2 ರಿಂದ 3 ಬಾರಿ ಗ್ರಾಮಕ್ಕೆ ಬಂದು ಹೋಗುತ್ತಿದ್ದರು.

ಆದರೆ ಗೋವಿಂದರಾಜು ಅವರ ಅಕ್ಕಪಕ್ಕದ ನಿವಾಸಿಗಳು ಅಂತರ್ ಜಾತಿ ವಿವಾಹದ ಬಗ್ಗೆ ಮಾಹಿತಿಯನ್ನು ಪಡೆದು ಶ್ವೇತಾ ನಮ್ಮ ಜಾತಿಯವಳಲ್ಲ, ಅವಳು ದಲಿತ ಜನಾಂಗಕ್ಕೆ ಸೇರಿದವಳು ಎಂದು ಪಕ್ಕದ ಮನೆಯವರಾದ ಜಯಲಕ್ಷ್ಮಿ, ಮಧು, ರಂಗಸ್ವಾಮಿ, ಕುಳ್ಳ, ಮಹದೇವಪ್ಪ ಮಹದೇವ ಶೆಟ್ಟಿ ಇವರುಗಳು ಗ್ರಾಮದ ಯಜಮಾನರುಗಳಿಗೆ ಮಾಹಿತಿ ನೀಡಿ ಎರಡರಿಂದ ಮೂರು ಬಾರಿ ಪಂಚಾಯಿತಿ ನಡೆಸಿ ದಂಡ ಕಟ್ಟಬೇಕು ಎಂದು ಸೂಚಿಸಿದ್ದರು.

ದಂಪತಿ ಡಿವೈಎಸ್ಪಿ ಕಚೇರಿಗೆ ದೂರು ನೀಡಿದ್ದಾರೆ. ಆದರೆ, ದೂರಿನ ವಿಷಯ ತಿಳಿದ ಹಿರಿಯರು ದಂಡದ ಮೊತ್ತವನ್ನು 6 ಲಕ್ಷಕ್ಕೆ ಹೆಚ್ಚಿಸಿ ಗ್ರಾಮದಲ್ಲಿ ಗೋವಿಂದರಾಜು ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದಾರೆ. ಗ್ರಾಮಸ್ಥರು ಕುಟುಂಬವನ್ನು ಗ್ರಾಮದಿಂದ ಹೊರಗೆ ಕಳುಹಿಸಿ, ಗ್ರಾಮದಿಂದ ಪಡಿತರ, ತರಕಾರಿ, ಹಾಲು ಖರೀದಿಸಬಾರದು ಮತ್ತು ನೀರು ತೆಗೆದುಕೊಳ್ಳಬಾರದು ಎಂದು ಆದೇಶಿಸಿದ್ದಾರೆ ಮತ್ತು ಅವರ ಈ ಆದೇಶವನ್ನು ಉಲ್ಲಂಘಿಸಿದರೆ ದಂಪತಿಯನ್ನು ಜೀವಂತ ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ಸಂಬಂಧ ಕೊಳ್ಳೇಗಾಲ ಡಿವೈಎಸ್ಪಿ ದೂರು ಪಡೆದು ಮಾಂಬಳ್ಳಿ ಪೊಲೀಸರಿಗೆ ಎಸ್ಸಿಎಸ್ಟಿ ದೌರ್ಜನ್ಯದಡಿ ಪ್ರಕರಣ ದಾಖಲಿಸುವಂತೆ ಸೂಚಿಸಿ ತನಿಖೆ ಕೈಗೊಂಡಿದ್ದರು. ಅದರಂತೆ, ಈಗ 12 ಮಂದಿ ಬಂಧನವಾಗಿದೆ.

RELATED TOPICS:
English summary :Excommunication case for inter-caste marriage: 12 arrested

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...