Fri,May10,2024
ಕನ್ನಡ / English

ಮಹಿಳಾ ASI ಜೊತೆ IPS ಅಧಿಕಾರಿ ಅಕ್ರಮ ಸಂಬಂಧ ಆರೋಪ, ಪತಿಯಿಂದ ದೂರು! | JANATA NEWS

13 Mar 2023
3606

ಕಲಬುರ್ಗಿ : IPS ಅಧಿಕಾರಿ ಅರುಣ್ ರಂಗರಾಜನ್​ ಅವರು ಮಹಿಳಾ ASI ಅಧಿಕಾರಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಕಲಬುರ್ಗಿಯಲ್ಲಿರುವಂತ ಪಿಡಬ್ಲ್ಯೂ ಡಿ ಕ್ವಾಟ್ರಾಸ್ ನಲ್ಲಿಯೇ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಹಾಗೂ ಮಹಿಳಾ ಎಎಸ್‌ಐ ಜೊತೆಗೆ ಅರೆ ಬೆತ್ತಲೆಯಾಗಿರುವುದನ್ನು ಕಂಡ ಹೆಡ್ ಕಾನ್ಸ್ ಸ್ಟೇಬಲ್ ಗಂಡನೇ ಶಾಕ್ ಆಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಹೆಡ್ ಕಾನ್ಸ್ ಸ್ಟೇಬಲ್ ಗಂಡ ಎಸ್ಪಿಗೆ ದೂರು ನೀಡಿದ್ದಾರೆ.

ಜಿಲ್ಲೆಯ ISD ವಿಭಾಗದಲ್ಲಿ ಕಳೆದ 3 ವರ್ಷಗಳಿಂದ ಈ ಇಬ್ಬರು ಕೆಲಸ ಮಾಡುತ್ತಿದ್ದಾರೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಮಹಿಳಾ ಎಎಸ್​ಐ ಜೊತೆ ಐಪಿಎಸ್​ ಅರುಣ್​ ಅನೈತಿಕ ಸಂಬಂಧ ಹೊಂದಿದ್ದಾರೆ ಎನ್ನಲಾಗಿದೆ. ಈ ಹಿಂದೆಯು ಇಬ್ಬರು ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಪತಿಗೆ ಸಿಕ್ಕಿ ಹಾಕಿಕೊಂಡಿದ್ದರು. ಹೀಗಾಗಿ ಎರಡ್ಮೂರು ಬಾರಿ ಪತ್ನಿಗೆ ಹಾಗೂ ಐಪಿಎಸ್ ಅಧಿಕಾರಿಗೆ ಪತಿ ತಿಳಿ ಹೇಳಿದ್ದರು.

ಈ ಸಂಬಂಧ ಹೆಡ್ ಕಾನ್ಸ್ ಸ್ಟೇಬಲ್ ಕಂಟೆಪ್ಪ ನೀಡಿರುವಂತ ದೂರಿನಲ್ಲಿ, ನಾನು 1997ನೇ ಸಾಲಿನಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ಹುದ್ದೆಗೆ ನೇಮಕಾತಿಗೊಂಡಿದ್ದೇನೆ. ಕರ್ತವ್ಯದ ವೇಳೆಯಲ್ಲಿ 2005ರಲ್ಲಿ ಪ್ರೀತಿಸಿ ಮಹಿಳಾ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಸುಜಾತಾಳನ್ನು ಮದುವೆಯಾಗಿದ್ದೆನೆ. ನಮಗೆ ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿಸಿದ್ದಾರೆ.

ನನ್ನ ಪತ್ನಿ ಸದ್ಯ ಎಎಸ್‌ಐ ಆಗಿ ಐಎಸ್ ಡಿ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಳೆ. ಐಎಸ್ ಡಿ ಘಟಕದ ಎಸ್ಪಿ ಆಗಿರುವಂತ ಅರುಣ್ ರಂಗರಾಜನ್ ಹಾಗೂ ನನ್ನ ಪತ್ನಿ ನಡುವೆ ಅಕ್ರಮ ಸಂಬಂಧ ಇರೋದು ಗೊತ್ತಾಗಿತ್ತು. ಒಂದೂವರೆ ತಿಂಗಳ ಹಿಂದೆ ನನ್ನ ಸಂಶಯದ ಬಗ್ಗೆ ವಿಚಾರಿಸಿದೆ. ಪತ್ನಿ ಹಾಗೂ ಅರುಣ್ ರಂಗರಾಜನ್ ಐ ವಾನ್ ಶಾಹಿ ರಸ್ತೆಯಲ್ಲಿರುವ ಪಿಡಬ್ಲ್ಯೂ ಡಿ ಕ್ವಾಟ್ರಾಸ್ ನಲ್ಲಿ ಇರುವ ಖಚಿತ ಮಾಹಿತಿ ಸಿಕ್ಕಿತ್ತು. ಅಲ್ಲಿಗೆ ಹೋಗಿ ನೋಡಿದಾಗ, ನನ್ನ ಪತ್ನಿ ಸುಜಾತಾ, ಅರುಣ್ ರಂಗರಾಜನ್ ಜೊತೆಗೆ ಇದ್ದದ್ದು ಕಂಡು ಬಂದಿತ್ತು ಎಂದಿದ್ದಾರೆ.

ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ, ಅರುಣ್ ರಂಗರಾಜನ್ ಪ್ರಶ್ನಿಸಿದಾಗ ನೀನು ಯಾರು ಕೇಳೋದಕ್ಕೆ. ನಮ್ಮ ಇಷ್ಟದಂತೆ ಇದ್ದೇವೆ ಎಂಬುದಾಗಿ ಹೇಳಿದರು. ಅಲ್ಲದೇ ನನ್ನ ಮೇಲೆ ಹಲ್ಲೆ ನಡೆಸಿದರು. ನನಗೆ ಗಾಯಗಳಾಗಿವೆ. ಅಲ್ಲಿಂದ ನಾನು ಹೇಗೋ ತಪ್ಪಿಸಿಕೊಂಡು ಬಂದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಬಳಿಕ ಬುದ್ಧಿಹೇಳಿ ಮಕ್ಕಳ ಸಲುವಾಗಿ ಪತ್ನಿಯ ಜೊತೆಗೆ ಇದ್ದೆನು. ಮಾರ್ಚ್ 7ರಂದು ಮಧ್ಯಾಹ್ನ ಬಿಡಬ್ಲ್ಯೂ ಕ್ವಾಟ್ರಾಸ್ ನಲ್ಲಿ ಮತ್ತೆ ಅಸಹ್ಯರೀತಿಯಲ್ಲಿ ಅರೆಬೆತ್ತಲೆಯಾಗಿ ಕಂಡು ಬಂದರು. ಅದನ್ನು ನನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದೇನೆ. ಸದ್ಯ ತನ್ನ ಪತ್ನಿ ಹಾಗೂ ಐಪಿಎಸ್ ಅರುಣ್ ರಂಗರಾಜನ್ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

RELATED TOPICS:
English summary :IPS officer accused of illicit relationship with female ASI, husband complains!

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...